ADVERTISEMENT

15 ಕಡೆ ವಿದ್ಯಾರ್ಥಿ ನಿಲಯ: ಪ್ರಸ್ತಾವನೆ ಸಲ್ಲಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 21:26 IST
Last Updated 1 ಜುಲೈ 2021, 21:26 IST
ಕೋಟಾ ಶ್ರೀನಿವಾಸ ಪೂಜಾರಿ
ಕೋಟಾ ಶ್ರೀನಿವಾಸ ಪೂಜಾರಿ   

ಬೆಂಗಳೂರು: ನಗರದಲ್ಲಿ ನಿವೇಶನ ಲಭ್ಯ ಇರುವ 15 ಕಡೆ ಆತ್ಮ ನಿರ್ಭರ ಯೋಜನೆಯಡಿ ವಿದ್ಯಾರ್ಥಿ ವಸತಿ ನಿಲಯ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ‍ಪೂಜಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ‘ರಾಜ್ಯದ ಎಲ್ಲೆಡೆಯಿಂದ ವಿದ್ಯಾರ್ಥಿಗಳು ಬೆಂಗಳೂರಿಗೆ ಬರುವ ಕಾರಣ ವಿದ್ಯಾರ್ಥಿ ನಿಲಯಗಳಿಗೆ ಬೇಡಿಕೆ ಹೆಚ್ಚಿದೆ. ಖಾಸಗಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸುವ ಅಗತ್ಯವಿದೆ’ ಎಂದರು.‌

ಈಗಾಗಲೇ ಪ್ರಗತಿಯಲ್ಲಿರುವ 9 ವಸತಿ ನಿಲಯಗಳ ನಿರ್ಮಾಣ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ ಕಟ್ಟಡ ಹಸ್ತಾಂತರಿಸಲು ನಿರ್ಮಿತಿ ಕೇಂದ್ರದ ಅಧಿಕಾರಿಗೆ ಸೂಚಿಸಿದರು.

ADVERTISEMENT

ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ಆಹಾರ ಪೂರೈಸಿದವರಿಗೆ ದ್ವಿಚಕ್ರ ವಾಹನ ಖರೀದಿಗೆ ದೇವರಾಜು ಅರಸು ನಿಗಮದಿಂದ ಸಹಾಯಧನ‌ನೀಡಲಾಗುವುದು ಎಂದು ನಿಗಮದ ಅಧಿಕಾರಿ‌ ಸಭೆಗೆ ತಿಳಿಸಿದರು.‌

ವಿಧಾನ ಪರಿಷತ್ತಿನ ಸದಸ್ಯರಾದ ಪಿ.ಆರ್. ರಮೇಶ್, ರಮೇಶ್‌ಗೌಡ, ರವಿಕುಮಾರ್, ಅ. ದೇವೇಗೌಡ, ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ. ಮಹೇಶ್, ಜಿಲ್ಲಾಧಿಕಾರಿ ಜೆ.ಮಂಜುನಾಥ್ ಇದ್ದರು.

ದೇವಾಲಯಗಳ ಆಸ್ತಿ ಸಂರಕ್ಷಿಸಲು ಸೂಚನೆ
‘ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಮುಜರಾಯಿ ದೇವಾಲಯಗಳ ಆಸ್ತಿಗಳನ್ನು ಸಂರಕ್ಷಿಸುವುದು ಕಾರ್ಯನಿರ್ವಹಣಾ ಅಧಿಕಾರಿಗಳ ಜವಾಬ್ದಾರಿ’ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮುಜರಾಯಿ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ದೇವಾಲಯಗಳ ಸರ್ವೆ ಕಾರ್ಯ ಕೈಗೊಂಡು, ಗಡಿ ಗುರುತಿಸಿ, ಬೇಲಿ ಹಾಕಿ ರಕ್ಷಿಸಲು ಕೂಡಲೇ ಕಾರ್ಯಪ್ರವೃತ್ತರಾಗಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.