ADVERTISEMENT

ಕೊರೊನಾ ನಿರ್ವಹಣೆ: ರಾಜ್ಯ ಸರ್ಕಾರ ವಿಫಲವಾಗಿದೆ -ಸಲೀಂ ಅಹಮದ್‌ ಆರೋಪ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 20:51 IST
Last Updated 20 ಸೆಪ್ಟೆಂಬರ್ 2020, 20:51 IST
‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಚಾಲನೆ ನೀಡಿದರು. ಬಿ.ಕೆ. ಹರಿಪ್ರಸಾದ್‌, ಕೆಂಗಲ್‌ ಶ್ರೀಪಾದ ರೇಣು ಇದ್ದರು
‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಚಾಲನೆ ನೀಡಿದರು. ಬಿ.ಕೆ. ಹರಿಪ್ರಸಾದ್‌, ಕೆಂಗಲ್‌ ಶ್ರೀಪಾದ ರೇಣು ಇದ್ದರು   

ಬೆಂಗಳೂರು: ‘ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪರೀಕ್ಷೆಗಳನ್ನು ಹೆಚ್ಚು ಮಾಡಿದರೆ ಹೆಚ್ಚು ಜನರಿಗೆ ಕೋವಿಡ್‌ ಇರುವುದು ಗೊತ್ತಾಗಲಿದೆ. ಇದರಿಂದ ಕೆಟ್ಟ ಹೆಸರು ಬರುತ್ತದೆ ಎಂದು ರಾಜ್ಯ ಸರ್ಕಾರ ಹೆಚ್ಚು ಪರೀಕ್ಷೆಗಳನ್ನು ಮಾಡುತ್ತಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಆರೋಪಿಸಿದರು.

ಕೆಪಿಸಿಸಿ ವತಿಯಿಂದ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಜಲಗಂಗಮ್ಮ ಸಮುದಾಯ ಭವನದಲ್ಲಿ ಆಯೋಜಿಸಿದ್ದ ‘ಆರೋಗ್ಯ ಹಸ್ತ’ ಹಾಗೂ ಸ್ವಯಂ ಸೇವಕರಿಗೆ ಕೋವಿಡ್‌ ತಪಾಸಣೆ ಕುರಿತ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಮಾತನಾಡಿ, ‘ಅಮೆರಿಕದಲ್ಲಿ 10 ಲಕ್ಷ ಜನರಲ್ಲಿ 1.15 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಆದರೆ, ಭಾರತದಲ್ಲಿ ಕೇವಲ 11 ಸಾವಿರ ಜನರಿಗೆ ಪರೀಕ್ಷೆ ಮಾಡಲಾಗುತ್ತಿದೆ’ ಎಂದರು.

ADVERTISEMENT

ಕಾಂಗ್ರೆಸ್‌ ಮುಖಂಡ ಕೆಂಗಲ್‌ ಶ್ರೀಪಾದ ರೇಣು ಮಾತನಾಡಿ, ‘ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲಿ 60 ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಕೋವಿಡ್‌ ತಪಾಸಣೆ ನಡೆಸಲಿದ್ದು, ಅವರಿಗೆ ವೈದ್ಯರು ಅಗತ್ಯ ತರಬೇತಿ ನೀಡಲಿದ್ದಾರೆ’ ಎಂದರು. ಇದೇ ಸಂದರ್ಭದಲ್ಲಿ ಶ್ರೀಪಾದ ರೇಣು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ₹ 2 ಲಕ್ಷ ದೇಣಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.