ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ವೈದ್ಯಕೀಯ ಘಟಕವು ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಹಮ್ಮಿಕೊಂಡಿದೆ.
‘ಇದೇ 28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಯುವ ಈ ಶಿಬಿರದಲ್ಲಿ ತತಾಗತ್ ಆಸ್ಪತ್ರೆಯ ಹಿರಿಯ ವೈದ್ಯರು ಭಾಗವಹಿಸಲಿದ್ದು ಇಸಿಜಿ, ರಕ್ತದಲ್ಲಿನ ಸಕ್ಕರೆ ಪ್ರಮಾಣ ಸೇರಿದಂತೆ ಇತರ ತಪಾಸಣೆಗಳನ್ನು ಮಾಡಲಿದ್ದಾರೆ’ ಎಂದು ವೈದ್ಯಕೀಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಶಂಕರ ದ್ವಾರಕನಾಥ್ ಬೆಳ್ಳೂರ್ ತಿಳಿಸಿದ್ದಾರೆ.
ಬನಶಂಕರಿ 1ನೇ ಹಂತದಲ್ಲಿರುವ ಬ್ಯಾಂಕ್ ಕಾಲೊನಿ ಬಸ್ನಿಲ್ದಾಣದ ಹಿಂಭಾಗದಲ್ಲಿರುವ ಕೆಪಿಸಿಸಿ ಬೆಂಗಳೂರು ದಕ್ಷಿಣ ವಿಭಾಗದ ವೈದ್ಯಕೀಯ ಘಟಕದ ಕಚೇರಿ ಆವರಣದಲ್ಲಿ ಶಿಬಿರ ನಡೆಯಲಿದೆ.
ಹೆಸರು ನೋಂದಾಯಿಸಲು 96068 09309ಗೆ ಕರೆ ಮಾಡಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.