ಬೆಂಗಳೂರು: ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಮದ್ರಾಸ್ ರಸ್ತೆಯ ಸೇತುವೆ ಮೇಲೆ ಟಾಟಾ ಏಸ್ ಸರಕು ಸಾಗಣೆ ವಾಹನ ಹಾಗೂ ಬೈಕ್ ನಡುವೆ ಬುಧವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ಬೈಕ್ ಸವಾರರಾದ ಬಿ.ಶಾಲಿನಿ (27) ಮೃತಪಟ್ಟಿದ್ದಾರೆ.
ಜೆ.ಪಿ.ನಗರದ ನೀರಾ ಥಾಯ್ ಸ್ಪಾದಲ್ಲಿ ಶಾಲಿನಿ ಅವರು ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಕೋರಮಂಗಲದ ತೆರಿಗೆ ಕಚೇರಿಯ ಎದುರಿನ ಅಂಬೇಡ್ಕರ್ ನಗರದಲ್ಲಿ ನೆಲೆಸಿದ್ದರು. ಬುಧವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಟಿನ್ ಫ್ಯಾಕ್ಟರಿ ಕಡೆಯಿಂದ ಸರಕು ವಾಹನ ಬರುತ್ತಿತ್ತು. ಚಾಲಕ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಸೇತುವೆಯ ಮಸೀದಿ ಬಳಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು, ಶಾಲಿನಿ ಹಾಗೂ ಹಿಂಬದಿ ಸವಾರರಾದ ಜೆ. ಅಲೆನ್
ಸ್ಮಿತ್ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಆಲ್ಟೋರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶಾಲಿನಿ ಮೃತಪಟ್ಟಿದ್ದಾರೆ. ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಚಾಲಕನ ಪತ್ತೆ ಮಾಡಲಾಗುವುದು’ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.