ಬೆಂಗಳೂರು: ಕೆ.ಆರ್.ಪುರ ಸಮೀಪದ ಬಸವನಪುರ ವಾರ್ಡ್ನ ಶೀಗೆಹಳ್ಳಿ ಸ್ಮಶಾನ ಅಭಿವೃದ್ಧಿಗೆ ಪಾಲಿಕೆ ಸದಸ್ಯ ಜಯಪ್ರಕಾಶ್ ಚಾಲನೆ ನೀಡಿದರು.
₹ 10 ಲಕ್ಷ ವೆಚ್ಚದಲ್ಲಿ ಸ್ಮಶಾನಕ್ಕೆ ಹೊಸರೂಪ ನೀಡಲಾಗುತ್ತಿದೆ. ಇದರಲ್ಲಿ ತಡೆಗೋಡೆ ನಿರ್ಮಿಸಿ, ತಂತಿಬೇಲಿ ಅಳವಡಿಸುವ ಕಾಮಗಾರಿ ಸೇರಿದೆ.
‘ಸ್ಮಶಾನದಲ್ಲಿ ಪುಂಡಪೋಕರಿಗಳ ಕಾಟ ಹೆಚ್ಚಿದೆ. ಈ ಜಮೀನಿನ ಸುತ್ತ ಭೂಗಳ್ಳರ ಹಾವಳಿಯೂ ಹೆಚ್ಚುತ್ತಿದೆ. ಇಲ್ಲಿ ರಾತ್ರಿವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಬಂದಿವೆ. ಹಾಗಾಗಿ ಕಾಮಗಾರಿ ಕೈಗೆತ್ತಿಕೊಂಡಿವೆ. ಮುಂದಿನ ದಿನಗಳಲ್ಲಿ ಪಕ್ಕಾ ರಸ್ತೆ ಮತ್ತು ವಿದ್ಯುತ್ ಸಂಪರ್ಕದ ವ್ಯವಸ್ಥೆ ಕಲ್ಪಿಸುತ್ತೇವೆ’ ಎಂದು ಜಯಪ್ರಕಾಶ್ ಹೇಳಿದರು.
‘ವಾರ್ಡ್ನಲ್ಲಿ ಕಸ ವಿಲೇವಾರಿ, ಕೆರೆ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ, ಕುಡಿಯುವ ನೀರು ಪೂರೈಕೆ, ಒಳಚರಂಡಿ, ರಸ್ತೆಗಳ ಡಾಂಬರೀಕರಣಕ್ಕೆ ಆದ್ಯತೆ ನೀಡಲಾಗಿದೆ. ಎಲ್ಲ ವರ್ಗಗಳ ಜನರಿಗೂ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುತ್ತಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.