ADVERTISEMENT

ರಾಜಕೀಯ ಲಾಭಕ್ಕಾಗಿ ವಾರ್ಡ್‌ ಮರು ವಿಂಗಡಣೆ: ಕೃಷ್ಣಬೈರೇಗೌಡ ಆರೋಪ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 21:27 IST
Last Updated 21 ಸೆಪ್ಟೆಂಬರ್ 2020, 21:27 IST
ಕೃಷ್ಣಬೈರೇಗೌಡ ಅವರನ್ನು ಯುವಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಿದರು
ಕೃಷ್ಣಬೈರೇಗೌಡ ಅವರನ್ನು ಯುವಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಿದರು   

ಯಲಹಂಕ: ‘ರಾಜ್ಯ ಸರ್ಕಾರವು ಬಿಬಿಎಂಪಿ ವಾರ್ಡ್‌ಗಳ ಪುನರ್ ವಿಂಗ ಡಣೆಯನ್ನು ಜನರ ಅನುಕೂಲಕ್ಕೆ ತಕ್ಕಂತೆ ಮಾಡದೆ, ರಾಜಕೀಯ ಲಾಭಕ್ಕಾಗಿ ಇಷ್ಟಬಂದಂತೆ ಮಾಡಿಕೊಂಡಿದೆ’ ಎಂದು ಶಾಸಕ ಕೃಷ್ಣಬೈರೇಗೌಡ ಆರೋಪಿಸಿದರು.

ಅವಧಿ ಪೂರ್ಣಗೊಳಿಸಿದ ಬಿಬಿಎಂಪಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆಬ್ಯಾಟರಾಯನಪುರ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೊಡಿಗೇಹಳ್ಳಿಯ ಗುಂಡಾಂಜನೇಯಸ್ವಾಮಿ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

‘ಯಾವಾಗ ಬೇಕಾದರೂ ಗ್ರಾಮಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗಳು ನಡೆಯುವ ಸಂಭವವಿರುವುದರಿಂದ ಕಾರ್ಯಕರ್ತರು ಹಾಗೂ ಮುಖಂಡರು ಈಗಿನಿಂದಲೇ ಸಿದ್ಧರಾಗಿ ಪಕ್ಷಸಂಘಟನೆಯಲ್ಲಿ ಸಕ್ರಿಯರಾಗಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.