ADVERTISEMENT

ಬಿಬಿಎಂಪಿ ಚುನಾವಣೆಗೆ ಅಭ್ಯರ್ಥಿಗಳ ಆಹ್ವಾನ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 17:03 IST
Last Updated 14 ಜನವರಿ 2022, 17:03 IST

ಬೆಂಗಳೂರು:ಬಿಬಿಎಂಪಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷವು ಜನಪರ ಕಾಳಜಿಯುಳ್ಳ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಮತ್ತು ಬೆಂಗಳೂರು ಉಸ್ತುವಾರಿ ರಘುಪತಿ ಭಟ್, ‘ಕೆಆರ್‌ಎಸ್‌ ಪಕ್ಷ ಜನರ ಸಹಭಾಗಿತ್ವದಲ್ಲಿ ಸಮೃದ್ಧ ಬೆಂಗಳೂರು ನಿರ್ಮಿಸುವ ಗುರಿ ಹೊಂದಿದೆ. ಸ್ವತಂತ್ರವಾಗಿ ಯೋಚಿಸುವ ಮಹಿಳೆಯರು ರಾಜಕಾರಣದಲ್ಲಿ ತೊಡಗಲು ಹಾಗೂ ಚುನಾವಣೆಗಳಲ್ಲಿ ಸ್ಪರ್ಧಿಸಲು ವೇದಿಕೆ ಕಲ್ಪಿಸಲಿದೆ’ ಎಂದರು.

‘ಬಿಬಿಎಂಪಿ ಚುನಾವಣೆಗೆ ಎಲ್ಲ ವಾರ್ಡ್‌ಗಳಿಂದ ಉತ್ತಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ವಿಶೇಷವಾಗಿ ನಡೆಯಲಿದೆ. ಆಸಕ್ತರು https://cybermatrix.in/bbmpelereg ಅಥವಾ 9611720802 ಸಂಖ್ಯೆಗೆ BBMP ಎಂದು ವಾಟ್ಸ್‌ಆ್ಯಪ್‌ ಮಾಡಬಹುದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.