ADVERTISEMENT

ಪ್ಲಾಸ್ಮಾ ದಾನದ ಜಾಗೃತಿಗೆ ಸೈಕಲ್ ಜಾಥಾ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 20:54 IST
Last Updated 28 ಆಗಸ್ಟ್ 2020, 20:54 IST

ಬೆಂಗಳೂರು: ಕೊರೊನಾ ಸೋಂಕಿತರ ಜೀವ ಉಳಿಸಲು ಪ್ಲಾಸ್ಮಾ ದಾನ ಮಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಪೊಲೀಸ್ ಮೀಸಲು ಪಡೆ (ಕೆಎಸ್‌ಆರ್‌ಪಿ) ವತಿಯಿಂದ ಆ. 30ರಂದು ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ.

ಅಶೋಕನಗರದ ಸುಲಿವಾನ್ ಪೊಲೀಸ್ ಹಾಕಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 7.15 ಗಂಟೆಗೆ ಜಾಥಾಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಚಾಲನೆ ನೀಡಲಿದ್ದಾರೆ.

‘ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖವಾಗಿರುವ ಪೊಲೀಸರು, ಕೊರೊನಾ ಸೋಂಕಿತ ಸಾರ್ವಜನಿಕರಿಗೂ ಪ್ಲಾಸ್ಮಾ ದಾನ ಮಾಡುತ್ತಿದ್ದಾರೆ. ಈಗ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಈ ಜಾಥಾ ಆಯೋಜಿಸಲಾಗಿದೆ’ ಎಂದು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್‌ಕುಮಾರ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.