ADVERTISEMENT

ಕೆಎಸ್‌ಆರ್‌ಟಿಸಿ: ಬೆಂಗಳೂರಿನಲ್ಲಿ 15 ಪಿಕ್‌ಅಪ್ ಪಾಯಿಂಟ್‌

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 11:19 IST
Last Updated 8 ಜೂನ್ 2020, 11:19 IST
ಕೆಎಸ್‌ಆರ್‌ಟಿಸಿ ಬಸ್
ಕೆಎಸ್‌ಆರ್‌ಟಿಸಿ ಬಸ್   

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ ಹತ್ತಲು ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಹೋಗುವುದುಇನ್ನು ಮುಂದೆ ಅನಿವಾರ್ಯ ಅಲ್ಲ. ನಗರದ15 ಪಿಕ್‌ಅಪ್‌ ಪಾಯಿಂಟ್‌ಗಳಿಂದಲೂ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ನವರಂಗ್‌, ಗೋವರ್ಧನ್(ಯಶವಂತಪುರ), ಗೊರಗುಂಟೆಪಾಳ್ಯ, ಜಾಲಹಳ್ಳಿ ಕ್ರಾಸ್, 8ನೇ ಮೈಲಿ, ಹೆಬ್ಬಾಳ, ಯಲಹಂಕ, ಕಾರ್ಪೊರೇಷನ್ ಸರ್ಕಲ್, ಟಿನ್‌ ಫ್ಯಾಕ್ಟರಿ, ಕೆ.ಆರ್.ಪುರ, ಐಟಿಐ ಗೇಟ್, ಕಾವೇರಿಭವನ, ಕಲಾಸಿಪಾಳ್ಯ, ನಾಯಂಡಹಳ್ಳಿ ಮತ್ತು ಕೆಂಗೇರಿ ಪಿಕ್‌ಅಪ್‌ ಪ್ಯಾಯಿಂಟ್‌ಗಳಿಂದಲೂ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲಾಗುತ್ತದೆ. ಬಸ್ ಹತ್ತುವ ಮುನ್ನ ಥರ್ಮಲ್ ಸ್ಕ್ಯಾನ್‌ ಮೂಲಕ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT