ADVERTISEMENT

KSRTC: ಅನುಕಂಪದ ಆಧಾರದ ಮೇಲೆ 14 ಮಂದಿಗೆ ನೇಮಕಾತಿ ಆದೇಶ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 16:27 IST
Last Updated 8 ಜುಲೈ 2025, 16:27 IST
14 ಮಂದಿಗೆ ನೇಮಕಾತಿ ಆದೇಶ ಪ್ರತಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದರು.
14 ಮಂದಿಗೆ ನೇಮಕಾತಿ ಆದೇಶ ಪ್ರತಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದರು.    

ಬೆಂಗಳೂರು: ಅನುಕಂಪದ ಆಧಾರದ ಮೇಲೆ ನೇಮಕಾತಿ ಕೋರಿ ಅರ್ಜಿ ಸಲ್ಲಿಸಿದ್ದ 14 ಮಂದಿಗೆ ಕಚೇರಿ ಸಹಾಯಕ (ಸ್ವಚ್ಚತೆ) ಹುದ್ದೆಯ ನೇಮಕಾತಿ ಆದೇಶದ ಪ್ರತಿಯನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಂಗಳವಾರ ವಿತರಿಸಿದರು.

ಒಂದು ವರ್ಷದಲ್ಲಿ ಒಟ್ಟಾರೆ 212 ಮೃತರ ಅವಲಂಬಿತರಿಗೆ ಅನುಕಂಪದ ಆಧಾರದ ನೇಮಕಾತಿ ಮಾಡಲಾಗಿದೆ. ಭದ್ರತಾ ಸಿಬ್ಬಂದಿ– 107, ‌ಕಚೇರಿ ಸಹಾಯಕ (ಸ್ವಚ್ಚತೆ)–46, ತಾಂತ್ರಿಕ ಸಹಾಯಕ–37, ಚಾಲಕ / ನಿರ್ವಾಹಕ / ಚಾಲಕ ಕಂ ನಿರ್ವಾಹಕ–22 ಸೇರಿ ಒಟ್ಟಾರೆ 226 ಅನುಕಂಪದ ನೌಕರಿ ನೀಡಲಾಗಿದೆ. ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ವಾರದಲ್ಲಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಲಾಗುತ್ತದೆ.

ಕೆಎಸ್‌ಆರ್‌ಟಿಸಿ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ಕೆ. ನಂದಿನಿ ದೇವಿ, ನಿರ್ದೇಶಕ ಇಬ್ರಾಹಿಂ ಮೈಗೂರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT