ಬೆಂಗಳೂರು: 14 ದಿನಗಳ ಕರ್ಫ್ಯೂ ಕಾರಣದಿಂದ ಊರುಗಳಿಗೆ ತೆರಳಲು ಹೊರಟಿರುವ ಜನರಿಗೆ ಅನುಕೂಲ ಆಗುವಂತೆ 12 ಸಾವಿರ ಬ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಬೆಂಗಳೂರಿನಿಂದ ಹೊರ ಜಿಲ್ಲೆಗಳಿಗೆ ಮತ್ತು ಇತರ ಪ್ರದೇಶಗಳಿಗೆ ಈ ಬಸ್ಗಳು ಸಂಚರಿಸಲಿವೆ. ಮಂಗಳವಾರ ರಾತ್ರಿ ಕರ್ಫ್ಯೂ ಆರಂಭ ಆಗುವುದರೊಳಗೆ ಈ ಬಸ್ಗಳ ಕಾರ್ಯಾಚರಣೆ ಮುಕ್ತಾಯಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪ್ರಯಾಣ ಮಾಡುವಂತೆ ಅವರು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.