ADVERTISEMENT

ಕೆಎಸ್‌ಆರ್‌ಟಿಸಿಯಿಂದ ‘ತುರ್ತು ಸ್ಪಂದನಾ ದಳ’ ರಚನೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2019, 19:27 IST
Last Updated 2 ಮಾರ್ಚ್ 2019, 19:27 IST
   

ಬೆಂಗಳೂರು: ಬಸ್‌ ನಿಲ್ದಾಣಗಳಲ್ಲಿ ಸಂಭವನೀಯ ಅನಾಹುತಗಳನ್ನು ತಪ್ಪಿಸಲು ವಿಭಾಗಮಟ್ಟದಲ್ಲಿ ‘ತುರ್ತು ಸ್ಪಂದನಾ ದಳ’ ರಚಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.

‘ವಿಭಾಗಮಟ್ಟದಲ್ಲಿ ರಚಿಸಿದ ದಳದ ಕಾರ್ಯ ಚಟುವಟಿಕೆಯನ್ನು ಕೇಂದ್ರ ಕಚೇರಿಮಟ್ಟದಲ್ಲಿ ರಚಿಸಿದ ವಿಶೇಷ ತಂಡ ಮೇಲ್ವಿಚಾರಣೆ ಮಾಡಲಿದೆ’ ಎಂದೂ ಅವರು ಹೇಳಿದ್ದಾರೆ.

ವಿಭಾಗೀಯ ನಿಯಂತ್ರಣಾಧಿಕಾರಿಗಳ ನೇತೃತ್ವದಲ್ಲಿ ಆಯಾ ವಿಭಾಗದ ಭದ್ರತಾ ಸಿಬ್ಬಂದಿಯನ್ನು ಒಳಗೊಂಡ ದಳ ಬಸ್‌ ನಿಲ್ದಾಣಗಳಲ್ಲಿ ನಿರಂತರ ಗಸ್ತು ತಿರುಗಲಿದೆ. ಈ ದಳದ ಜೊತೆ ಆಯಾ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

ADVERTISEMENT

‘ಬಸ್‌ ನಿಲ್ದಾಣಗಳಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾದರೆ ನಿಗಮದ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದೂ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.