ADVERTISEMENT

ಕೆಎಸ್‌ಆರ್‌ಟಿಸಿ: ನೇಮಕಾತಿ ಪ್ರಕ್ರಿಯೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 3:04 IST
Last Updated 22 ಅಕ್ಟೋಬರ್ 2020, 3:04 IST

ಬೆಂಗಳೂರು: ನಿಗಮದ ಚಾಲಕ, ಚಾಲಕ–ಕಂ–ನಿರ್ವಾಹಕ, ತಾಂತ್ರಿಕ ಸಹಾಯಕ, ಭದ್ರತಾ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳನ್ನು ಕೆಎಸ್‌ಆರ್‌ಟಿಸಿ ಸ್ಥಗಿತಗೊಳಿಸಿದೆ.

ಕೋವಿಡ್ ಕಾರಣದಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯಲಾಗಿದೆ. ಪ್ರಕ್ರಿಯೆ ಆರಂಭವಾದ ನಂತರ ಮಾಹಿತಿಯನ್ನು ನಿಗಮದ ವೆಬ್‌ಸೈಟ್‌ www.ksrtcjobs.karnataka.gov.in ಪ್ರಕಟಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT