ಬೆಂಗಳೂರು: ವೈದ್ಯರ ಸಲಹೆಯ ಮೇರೆಗೆ ಮೂರು ದಿನಗಳ ವಿಶ್ರಾಂತಿ ಪಡೆಯಲಿರುವ ಕಾರಣ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ.
ಇಂದಿನಿಂದ ಮೂರು ದಿನಗಳ ಕಾಲ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದಾರೆ. ಮೂರು ದಿನಗಳು ಅವರು ಕುಟುಂಬದೊಂದಿಗೆ ಕಾಲ ಕಳೆಯುವರು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಮೂಲಗಳ ಪ್ರಕಾರ, ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡು ವಿವಾದಕ್ಕೆ ಗುರಿಯಾಗುವುದನ್ನು ತಪ್ಪಿಸಲು ಅದರಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.