ADVERTISEMENT

ಡಾ. ಅನುಪಮಾ ನಿರಂಜನ ಪ್ರಶಸ್ತಿಗೆ ಎಲ್.ಗಿರಿಜಾ ರಾಜ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 20:01 IST
Last Updated 1 ಜೂನ್ 2022, 20:01 IST

ಬೆಂಗಳೂರು: ಕನ್ನಡ ಸಂಘರ್ಷ ಸಮಿತಿ ವತಿಯಿಂದ ನೀಡುವ ‘ಡಾ. ಅನುಪಮಾ ನಿರಂಜನ ಪ್ರಶಸ್ತಿಗೆ’ ಕವಯತ್ರಿ ಎಲ್. ಗಿರಿಜಾ ರಾಜ್ ಹಾಗೂ ‘ಕನ್ನಡ ಪರಿಚಾರಕ ಪ್ರಶಸ್ತಿಗೆ ಕನ್ನಡ ಕಾರ್ಯಕರ್ತ ಕುವರ ಯಲ್ಲಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ ₹5 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ ಎಂದು ಸಮಿತಿಯ ಅಧ್ಯಕ್ಷ ಎ.ಎಸ್.‌ ನಾಗರಾಜಸ್ವಾಮಿ ತಿಳಿಸಿದ್ದಾರೆ.

ಡಾ. ಅನುಪಮಾ ನಿರಂಜನ ಜನ್ಮದಿನ ಹಬ್ಬದ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಮಹಿಳಾ ಕಥಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿರುವ ಡಾ. ಎಸ್.ವಿ.ಗೌರಿ ಅವರಿಗೆ ₹2,500, ದ್ವಿತೀಯ ಬಹುಮಾನ ಪಡೆದಿರುವ ಆಶಾ ಹೆಗಡೆ ಅವರಿಗೆ ₹2 ಸಾವಿರ, ತೃತೀಯ ಬಹುಮಾನ ಪಡೆದಿರುವ ವಿಜಯಲಕ್ಷ್ಮೀ ನುಗ್ಗೇಹಳ್ಳಿ ಅವರಿಗೆ ₹1,500 ನೀಡಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಜೂನ್ 10ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆಯುವ ಡಾ. ಅನುಪಮಾ ನಿರಂಜನ ಹಾಗೂ ಡಾ. ಕೋ.ವೆಂ. ರಾಮಕೃಷ್ಣೇಗೌಡ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.