ADVERTISEMENT

ಕಾರ್ಖಾನೆಯಲ್ಲಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 19:57 IST
Last Updated 21 ಡಿಸೆಂಬರ್ 2019, 19:57 IST
ಮಣಿಕಂಠ
ಮಣಿಕಂಠ   

ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಔಷಧಿ ತಯಾರಿಕಾ ಕಾರ್ಖಾನೆಯಲ್ಲಿ ರಾತ್ರಿಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಣಿಕಂಠ (20) ಮೃತಪಟ್ಟಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಗೆ ಮೃತನ ಪೋಷಕರು ದೂರು ನೀಡಿದ್ದಾರೆ.

ಮೃತ ಕಾರ್ಮಿಕ ಡಿ.18ರಂದು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಔಷಧಿ ತಯಾರಿಕಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದರು. ಡಿ.20ರಂದು ರಾತ್ರಿ ಅಸ್ವಸ್ಥನಾಗಿ ಸಾವನಪ್ಪಿದ್ದಾರೆ ಎಂದು ಮೃತನ ಪೋಷಕರು ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ ಶೆಟ್ಟಿ ಬಣ) ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಈ ಕಾರ್ಖಾನೆಯಲ್ಲಿ ಕಾರ್ಮಿಕರು ಅಸ್ವಸ್ಥರಾಗುವ ಘಟನೆಗಳು ಸಾಮಾನ್ಯವಾಗಿವೆ. ಈ ಕಾರ್ಖಾನೆಯನ್ನು ಕೂಡಲೇ ಮುಚ್ಚಿಸಲು ಸಂಬಂಧಿತ ಇಲಾಖೆಗಳು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.