ADVERTISEMENT

ಸೇತುವೆಯಿಂದ ಬಿದ್ದು ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 26 ಜೂನ್ 2018, 20:08 IST
Last Updated 26 ಜೂನ್ 2018, 20:08 IST

ಬೆಂಗಳೂರು: ಬಾಣಸವಾಡಿಯ ಐಓಸಿ ಸೇತುವೆಯಿಂದ ಬಿದ್ದು ಕಾರ್ಮಿಕ ವೀರಬಹದ್ದೂರ್ (45) ಎಂಬುವರು ಮೃತಪಟ್ಟಿದ್ದಾರೆ.

ನೇಪಾಳದವರಾದ ವೀರಬಹದ್ದೂರ್‌ ವಾರದ ಹಿಂದೆ ನಗರಕ್ಕೆ ಬಂದಿದ್ದರು. ಮಗನ ಜತೆ ರಾಮಮೂರ್ತಿ ನಗರದಲ್ಲಿ ವಾಸವಿದ್ದರು. ಸೋಮವಾರ ಸಂಜೆ 6.45ರ ಸುಮಾರಿಗೆ ಸೇತುವೆ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

‘ವೀರಬಹದ್ದೂರ್ ಮದ್ಯವ್ಯಸನಿ ಆಗಿದ್ದರು. ಕುಡಿಯುವುದಕ್ಕಾಗಿಯೇ ಬಾಣಸವಾಡಿಗೆ ಹೋಗಿದ್ದಾಗ ಈ ದುರ್ಘಟನೆ ನಡೆದಿದೆ’ ಎಂದು ಕುಟುಂಬದವರು ಹೇಳಿದ್ದಾರೆ. ಆಯತಪ್ಪಿ ಸೇತುವೆಯಿಂದ ಬಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ’.

ADVERTISEMENT

‘ಅಂಬೇಡ್ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಪರೀಕ್ಷೆ ವರದಿ ಬಂದ ಬಳಿಕ ಸಾವಿನ ಬಗ್ಗೆ ನಿಖರ ಮಾಹಿತಿ ಸಿಗಬಹುದು’ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರು ಗುದ್ದಿ ಮಹಿಳೆ ಸಾವು: ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಹೊರ ರಸ್ತೆಯ ಮೆಟ್ರೊ ನಿಲ್ದಾಣ ಸಮೀಪ ಕಾರು ಗುದ್ದಿದ್ದರಿಂದಮಂಜುಳಾ (42) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಅವರು, ಸ್ಥಳೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕಂಪನಿಗೆ ಹೋಗಲೆಂದು ರಸ್ತೆ ದಾಟುತ್ತಿದ್ದ ವೇಳೆಯಲ್ಲೇ ಈ ದುರ್ಘಟನೆ ಸಂಭವಿಸಿದೆ.

‘ಘಟನೆ ಬಳಿಕ ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.