ADVERTISEMENT

ಫಲಪುಷ್ಪ ಪ್ರದರ್ಶನ: ಗೊಂದಲದಲ್ಲಿ ತೋಟಗಾರಿಕಾ ಇಲಾಖೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 19:26 IST
Last Updated 3 ಜನವರಿ 2022, 19:26 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ಬೆಂಗಳೂರು: ಜನವರಿ ಕೊನೆಯ ವಾರದಲ್ಲಿ ಲಾಲ್‌ಬಾಗ್ ಉದ್ಯಾನದಲ್ಲಿ ‘ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ’ ಆಯೋಜಿಸಲು ತೋಟಗಾರಿಕೆ ಇಲಾಖೆಎಲ್ಲ ಸಿದ್ಧತೆ ಮಾಡಿಕೊಂಡಿದೆ. ಆದರೆ, ಓಮೈಕ್ರಾನ್‌ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಪ್ರದರ್ಶನ ಆಯೋಜಿಸುವುದೋ ಅಥವಾ ರದ್ದು ಮಾಡುವುದೋ ಎಂಬ ಗೊಂದಲಕ್ಕೆಇಲಾಖೆ ಸಿಲುಕಿದೆ.

ಈ ಬಾರಿ ಫಲಪುಷ್ಪ ಪ್ರದರ್ಶನವನ್ನು ನಟರಾದ ರಾಜ್‌ಕುಮಾರ್ ಹಾಗೂ ಪುನೀತ್‌ ರಾಜ್‌ಕುಮಾರ್ ಗೌರವಾರ್ಥ ಆಯೋಜಿಸಲು ಉದ್ದೇಶಿಸಲಾಗಿತ್ತು.ಗಾಜಿನ ಮನೆಯಲ್ಲಿ ಇಬ್ಬರು ನಟರ ಹೂವಿನ ಪ್ರತಿಕೃತಿಗಳನ್ನು ನಿರ್ಮಿಸಿ, ಅವರಿಗೆ ಪುಷ್ಪನಮನ ಸಲ್ಲಿಸಲು ಎಲ್ಲ ತಯಾರಿ ನಡೆದಿದೆ. ಆದರೆ, ಕಳೆದ ವಾರದಿಂದ ಓಮೈಕ್ರಾನ್ ಸೋಂಕು ಪ್ರಕರಣಗಳು ದಿಢೀರ್ ಏರಿರುವುದರಿಂದ ಪ್ರದರ್ಶನ ನಡೆಯುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಪ್ರದರ್ಶನ ವೀಕ್ಷಿಸಲು ದಿನಕ್ಕೆ ಗರಿಷ್ಠ 500 ಮಂದಿಗೆ ಮಾತ್ರ ಅವಕಾಶ ನೀಡಬಹುದು ಎಂದುಪಾಲಿಕೆ ಸಲಹೆ ನೀಡಿದೆ.

‘ಕೆಲವೇ ಮಂದಿಗೆ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಿದರೆ ಅನಾನುಕೂಲವೇ ಹೆಚ್ಚು. ಇದರಿಂದ ಕೋಟ್ಯಂತರ ರೂಪಾಯಿ ನಷ್ಟ ತಪ್ಪಿದ್ದಲ್ಲ. ಹಾಗಾಗಿ, ಇಂತಹ ಪರಿಸ್ಥಿತಿಯಲ್ಲಿ ಪ್ರದರ್ಶನ ಕೈಬಿಡುವುದೇ ಸೂಕ್ತ’ ಎಂದುಮೈಸೂರು ಉದ್ಯಾನ ಕಲಾಸಂಘದ ಕೆಲ ಪದಾಧಿಕಾರಿಗಳು ನಿಲುವು ವ್ಯಕ್ತಪಡಿಸಿದ್ದಾರೆ.

ADVERTISEMENT

‘ಫಲಪುಷ್ಪ ಪ್ರದರ್ಶನಕ್ಕೆ ಎರಡು ತಿಂಗಳಿನಿಂದಲೇ ಸಿದ್ಧತೆಗಳು ನಡೆದಿವೆ. ಯೋಜನೆಯಂತೆ ಎಲ್ಲ ಕೆಲಸಗಳು ನಡೆಯುತ್ತಿವೆ. ಓಮೈಕ್ರಾನ್‌ ಪ್ರಕರಣಗಳೂ ಏರುಗತಿಯಲ್ಲಿವೆ. ಹಾಗಾಗಿ, ಜನವರಿ 10ರವರೆಗೆ ಕಾದು ನೋಡುತ್ತೇವೆ. ಸದ್ಯಕ್ಕೆ ಫಲಪುಷ್ಪ ಪ್ರದರ್ಶನ ರದ್ದು ಮಾಡಿಲ್ಲ’ ಎಂದು ತೋಟಗಾರಿಕೆ ಸಚಿವ ಮುನಿರತ್ನ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.