ಯಲಹಂಕ: ತಾಲ್ಲೂಕಿನ ಜಾಲಾ ಹೋಬಳಿ ವ್ಯಾಪ್ತಿಯ ಹೊಸಹಳ್ಳಿಯಲ್ಲಿ ರಾಜಕಾಲುವೆಯ ಮೇಲೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ 8 ಮನೆಗಳನ್ನು ತಾಲ್ಲೂಕು ಆಡಳಿತ ಸೋಮವಾರ ತೆರವುಗೊಳಿಸಿತು.
ಈ ವೇಳೆ ಮನೆ ಮಾಲೀಕರು ವಿರೋಧ ವ್ಯಕ್ತಪಡಿಸಿದರು. ನ್ಯಾಯಾಲಯದ ಆದೇಶದಂತೆ ತೆರವುಗೊಳಿಸಬೇಕಾಗಿದೆ ಎಂದು ಕಂದಾಯ ಅಧಿಕಾರಿಗಳು ಅವರಿಗೆ ಮನವರಿಕೆ ಮಾಡಿಕೊಟ್ಟರು.
ಸರ್ವೆ ನಂ.1,2 ಮತ್ತು 81,82ರ ಮಧ್ಯಭಾಗದ ರಾಜಕಾಲುವೆ ಓಣಿ ವಿವಾದವು 2011-12ರಿಂದಲೂ ನ್ಯಾಯಾಲಯದಲ್ಲಿದ್ದು, ಒತ್ತುವರಿ ತೆರವಿಗೆ ಹೈಕೋರ್ಟ್ ಆದೇಶ ನೀಡಿತ್ತು. ಸ್ಥಳೀಯ ನಿವಾಸಿಗಳಿಗೆ ಒಂದು ತಿಂಗಳು ಕಾಲಾವಕಾಶ ನೀಡಿ, ಸ್ವಪ್ರೇರಿತರಾಗಿ ತೆರವುಗೊಳಿಸಲು ಸೂಚಿಸಲಾಗಿತ್ತು. ಇದಕ್ಕೆ ಸ್ಪಂದಿಸದ ಕಾರಣ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
‘ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಳ್ಳಲು ಈ ಭಾಗದಲ್ಲಿ ಸರ್ಕಾರಿ ಭೂಮಿ ಮೀಸಲಿರಿಸಿ, ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುವುದು’ ತಹಶೀಲ್ದಾರ್ ರಘುಮೂರ್ತಿ ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.