ADVERTISEMENT

ಭೂ ಒತ್ತುವರಿ: ಸ್ವಪ್ರೇರಣೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 17:02 IST
Last Updated 27 ಮಾರ್ಚ್ 2023, 17:02 IST
   

ಬೆಂಗಳೂರು: ಕೆ.ಆರ್‌. ಪುರ ಹೋಬಳಿ ಚಿನ್ನಪ್ಪನಹಳ್ಳಿ ಗ್ರಾಮದ ಸರ್ವೆ ನಂ. 20ರಲ್ಲಿ 19 ಎಕರೆ 19 ಗುಂಟೆ ಸರ್ಕಾರಿ ಖರಾಬು ಭೂಮಿಯನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡ ಬಡಾವಣೆ ನಿರ್ಮಿಸಿರುವ ಘಟನೆಯನ್ನು ಸ್ವಯಂಪ‍್ರೇರಿತವಾಗಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡಿದೆ.

‍‘ಪ್ರಜಾವಾಣಿ’ಯಲ್ಲಿ ಮಾರ್ಚ್‌ 20ರಂದು ‘ಸರ್ಕಾರಿ ಜಮೀನು ಒತ್ತುವರಿ: ಕ್ರಮಕ್ಕೆ ಸೂಚನೆ’ ಶೀರ್ಷಿಕೆಯಡಿ ಸುದ್ದಿ ಪ್ರಕಟವಾಗಿತ್ತು. ಇದು ಭೂ ಒತ್ತುವರಿಗೆ ಸಂಬಂಧಿಸಿದ್ದಾಗಿರುವುದರಿಂದ ವಿಶೇಷ ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡಿದೆ. ಪೂರ್ವ ತಹಶೀಲ್ದಾರ್‌ ಅವರಿಗೆ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಮೇ 25ಕ್ಕೆ ಮುಂದೂಡಿದೆ ಎಂದು ಸರ್ಕಾರಿ ಅಭಿಯೋಜಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT