ADVERTISEMENT

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 19:13 IST
Last Updated 26 ಫೆಬ್ರುವರಿ 2020, 19:13 IST
ವಿದ್ಯಾರ್ಥಿಗಳಿಗೆ ಸಚಿವ ಬೈರತಿ ಬಸವರಾಜು ಲ್ಯಾಪ್‌ಟಾಪ್ ವಿತರಿಸಿದರು. ಪಾಲಿಕೆ ಸದಸ್ಯ ಜಯಪ್ರಕಾಶ್, ಪ್ರಾಂಶುಪಾಲ ಟಿ.ಸಿ.ಚಂದ್ರಶೇಖರ್, ಮುಖಂಡ ಅಂತೋಣಿಸ್ವಾಮಿ, ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ.ಕೆ.ನಾರಾಯಣ,‌ ಮುನೆಗೌಡ, ಕೆ.ಪಿ.ಕೃಷ್ಣ ಇದ್ದರು.
ವಿದ್ಯಾರ್ಥಿಗಳಿಗೆ ಸಚಿವ ಬೈರತಿ ಬಸವರಾಜು ಲ್ಯಾಪ್‌ಟಾಪ್ ವಿತರಿಸಿದರು. ಪಾಲಿಕೆ ಸದಸ್ಯ ಜಯಪ್ರಕಾಶ್, ಪ್ರಾಂಶುಪಾಲ ಟಿ.ಸಿ.ಚಂದ್ರಶೇಖರ್, ಮುಖಂಡ ಅಂತೋಣಿಸ್ವಾಮಿ, ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ.ಕೆ.ನಾರಾಯಣ,‌ ಮುನೆಗೌಡ, ಕೆ.ಪಿ.ಕೃಷ್ಣ ಇದ್ದರು.   

ಕೆ.ಆರ್.ಪುರ: ‘ಹಿಂದೆ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದರು. ಇದನ್ನು ಮನಗಂಡು ಸರ್ಕಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದರು.

ಕೆ.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕಾಲೇಜಿನಲ್ಲಿ ಹೆಚ್ಚುವರಿ ಕೋಣೆಗಳು, ಶೌಚಾಲಯ, ಗ್ರಂಥಾಲಯ, ಕ್ರೀಡಾಂಗಣ ನಿರ್ಮಾಣ ಮಾಡಲಾಗಿದೆ. ಒಟ್ಟು 684 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.