ಬೆಂಗಳೂರು: ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಶಾಸಕರು ರೆಸಾರ್ಟ್ನಲ್ಲೇ ಮತ್ತೆ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ವಿಧಾನಸಭೆ ಕಲಾಪ ಮುಗಿದ ನಂತರ ರೆಸಾರ್ಟ್ಗೆ ಕರೆದುಕೊಂಡು ಹೋಗಲಾಗಿದೆ.
ಆಪರೇಷನ್ ಕಮಲ, ಶಾಸಕರ ರಾಜೀನಾಮೆಯಿಂದ ಕಂಗಾಲಾಗಿರುವ ಕಾಂಗ್ರೆಸ್, ಜೆಡಿಎಸ್ ಮುಖಂಡರು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ರೇಸಾರ್ಟ್ನಲ್ಲೇ ತಂಗುವ ವ್ಯವಸ್ಥೆ ಮಾಡಿದ್ದರು. ಬಿಜೆಪಿ ಸಹ ತಮ್ಮ ಶಾಸಕರ ಸುರಕ್ಷತೆ ದೃಷ್ಟಿಯಿಂದ ರೇಸಾರ್ಟ್ನಲ್ಲೇ ವಾಸ್ತವ್ಯ ಕಲ್ಪಿಸಿದೆ.
ಅಧಿವೇಶನದ ಸಮಯದಲ್ಲಿ ಶುಕ್ರವಾರಕ್ಕೆ ಕಲಾಪ ಕೊನೆಗೊಂಡು, ಅಂದೇ ರಾತ್ರಿ ಅಥವಾ ಮರುದಿನ ತಮ್ಮ ಕ್ಷೇತ್ರಗಳಿಗೆ ತೆರಳುತ್ತಿದ್ದರು. ಮತ್ತೆ ಸೋಮವಾರ ಆರಂಭವಾಗುವ ಕಲಾಪದಲ್ಲಿ ಭಾಗವಹಿಸುತ್ತಿದ್ದರು. ಆದರೆ ಈ ಸಲ ಮುಖ್ಯಮಂತ್ರಿ ವಿಶ್ವಾಸಮತ ನಿರ್ಣಯ ಮಂಡನೆ ಮಾಡಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ಕ್ಷೇತ್ರಗಳಿಗೆ ಕಳುಹಿಸಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.