ADVERTISEMENT

ಬೆಂಗಳೂರು ವಿವಿ ಆವರಣದಲ್ಲಿ ಚಿರತೆ ಪ್ರತ್ಯಕ್ಷ

​ಪ್ರಜಾವಾಣಿ ವಾರ್ತೆ
Published 12 ಜನವರಿ 2023, 10:35 IST
Last Updated 12 ಜನವರಿ 2023, 10:35 IST
ಚಿರತೆ
ಚಿರತೆ   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬುಧವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಹಾಸ್ಟೆಲ್‌ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ರಾತ್ರಿ 11.30ರ ಸುಮಾರಿಗೆ ಹಾಸ್ಟೆಲ್ ಬಳಿ ಚಿರತೆ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳು ತಕ್ಷಣ ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಗೂ ಸಂದೇಶ ರವಾನಿಸಿದ್ದಾರೆ. ಸ್ವಲ್ಪ ಸಮಯ ಅಲ್ಲೇ ಅಲೆದಾಡಿದ ಚಿರತೆ ನಂತರ ಮರೆಯಾಗಿದೆ.

‘ವಿಶ್ವವಿದ್ಯಾಲಯದ ಆವರಣದ ಹಾಸ್ಟೆಲ್‌ ಬಳಿ ಚಿರತೆ ಕಾಣಿಸಿಕೊಂಡಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೇವೆ. ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಜಾಗರೂಕರಾಗಿರಬೇಕು. ರಾತ್ರಿ ಸಮಯದಲ್ಲಿ ಅನಗತ್ಯ ತಿರುಗಾಟ ನಡೆಸಬಾರದು. ಮತ್ತೆ ಕಾಣಿಸಿದರೆ ತಕ್ಷಣ ಮಾಹಿತಿ ನೀಡಬೇಕು’ ಎಂದು ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.