ಬೆಂಗಳೂರು: ನಿಟ್ಟೂರು– ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ಕೈಗೊಂಡಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ತುಮಕೂರು-ಚಾಮರಾಜನಗರ, ಚಾಮರಾಜನಗರ-ಮೈಸೂರು, ಚಾಮರಾಜನಗರ-ಯಶವಂತಪುರ–ಚಾಮರಾಜನಗರ, ತುಮಕೂರು-ಕೆಎಸ್ಆರ್ ಬೆಂಗಳೂರು–ತುಮಕೂರು, ಯಶವಂತಪುರ-ಶಿವಮೊಗ್ಗ-ಯಶವಂತಪುರ ರೈಲುಗಳನ್ನು ಜುಲೈ 18 ಮತ್ತು 25 ರಂದು ರದ್ದು ಪಡಿಸಲಾಗಿದೆ.
ಜುಲೈ 18 ಮತ್ತು 25ರಂದು ಕೆಎಸ್ಆರ್ ಬೆಂಗಳೂರು-ತುಮಕೂರು ನಿಲ್ದಾಣಗಳ ನಡುವೆ ಸಂಚರಿಸುವ ರೈಲುಗಳನ್ನು ಹಿರೇಹಳ್ಳಿ-ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ತಾಳಗುಪ್ಪ-ಕೆಎಸ್ಆರ್ ಬೆಂಗಳೂರು ರೈಲು, ಕೆಎಸ್ಆರ್ ಬೆಂಗಳೂರು-ಧಾರವಾಡ-ಕೆಎಸ್ಆರ್ ಬೆಂಗಳೂರು ರೈಲುಗಳನ್ನು ಅರಸೀಕೆರೆ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು ಮಾಡಲಾಗಿದೆ.
ಜುಲೈ 17 ಮತ್ತು 24ರಂದು ವಾಸ್ಕೋ ಡ ಗಾಮಾ-ಯಶವಂತಪುರ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ಜುಲೈ18 ಮತ್ತು 25 ರಂದು ಹೊರಡುವ ಮೈಸೂರು-ವಾರಾಣಸಿ ಮತ್ತು ಯಶವಂತಪುರ-ಜೈಪುರ ರೈಲುಗಳು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿವೆ. ತುಮಕೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ. ಮೈಸೂರು-ಬೆಳಗಾವಿ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ. ಮೈಸೂರು-ಉದಯಪುರ ಸಿಟಿ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮೂಲಕ ಸಂಚರಿಸಲಿದೆ.
ಜುಲೈ 16 ಮತ್ತು 23ರಂದು ಬಿಕಾನೇರ್-ಯಶವಂತಪುರ ರೈಲನ್ನು ಮಾರ್ಗದಲ್ಲಿ ಎರಡೂವರೆ ಗಂಟೆ, ಜುಲೈ 18 ಮತ್ತು 25 ರಂದು ಯಶವಂತಪುರ-ಹಜರತ್ ನಿಜಾಮುದ್ದೀನ್ ರೈಲು 50 ನಿಮಿಷ, ಕೆಎಸ್ಆರ್ ಬೆಂಗಳೂರು-ತಾಳಗುಪ್ಪ ರೈಲು 10 ನಿಮಿಷ, ಬೆಳಗಾವಿ-ಮೈಸೂರು ರೈಲು 55 ನಿಮಿಷ, ಚಾಮರಾಜನಗರ-ತುಮಕೂರು ರೈಲುಗಳನ್ನು ಎರಡು ಗಂಟೆ ಸಮಯ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ
ಜುಲೈ 18 ಮತ್ತು 25 ರಂದು ಯಶವಂತಪುರ-ವಾಸ್ಕೋ ಡ ಗಾಮಾ ರೈಲು ಯಶವಂತಪುರದಿಂದ 60 ನಿಮಿಷ, ಜುಲೈ 24 ರಂದು ತುಮಕೂರು-ಶಿವಮೊಗ್ಗ ರೈಲು ತುಮಕೂರಿನಿಂದ 85 ನಿಮಿಷ ತಡವಾಗಿ ಹೊರಡಲಿದೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.