ಬೆಂಗಳೂರು: ಕುಮಾರಸ್ವಾಮಿ ಬಡಾವಣೆಯಲ್ಲಿರುವ ದಕ್ಷಿಣ ವಲಯದ ನಗರ ಕೇಂದ್ರ ಗ್ರಂಥಾಲಯವು ನ.14ರಿಂದ ನ.20ರವರೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರಂಭ ಹಮ್ಮಿಕೊಂಡಿದೆ.
ಈ ಸಪ್ತಾಹದ ಭಾಗವಾಗಿ ಮಕ್ಕಳು, ಯುವಜನತೆ, ಹಿರಿಯ ನಾಗರಿಕರು ಸೇರಿದಂತೆ ವಿವಿಧ ವರ್ಗದವರಿಗೆ ಚಿತ್ರಕಲೆ, ಪ್ರಬಂಧ, ಭಕ್ತಿಗೀತೆ, ಭಾವಗೀತೆ, ಜಾನಪದಗೀತೆ, ಚಿತ್ರಗೀತೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುತ್ತದೆ. ಇದೇ 16ರಂದು ಬೆಳಿಗ್ಗೆ 10 ಗಂಟೆಗೆ ಜ್ಞಾನ ಪ್ರಸರಣ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.