ಬೆಂಗಳೂರು: ನೈಸರ್ಗಿಕ ವಿಕೋಪ, ಹಾಲಿನ ಸಬ್ಸಿಡಿ, ಬೆಳೆ ಹಾನಿಗಾಗಿ ಸರ್ಕಾರ ನೀಡುವ ಪರಿಹಾರ ಮೊತ್ತವನ್ನು ಯಾವುದೇ ಕಾರಣಕ್ಕೂ ರೈತರ ಸಾಲ ಮೊತ್ತಕ್ಕೆ ಜಮಾ ಮಾಡಿಕೊಳ್ಳುವಂತಿಲ್ಲ ಎಂದು ರಾಜ್ಯಮಟ್ಟದ ಬ್ಯಾಂಕರ್ಗಳ ಸಮಿತಿಯ ಸಂಚಾಲಕರೂ ಆಗಿರುವ ಸಿಂಡಿಕೇಟ್ ಬ್ಯಾಂಕ್ನ ಮಹಾಪ್ರಬಂಧಕ ಟಿ.ಮಣಿವಣ್ಣನ್ ಅವರು ಸೂಚನೆ ನೀಡಿದ್ದಾರೆ.
ಕೆಲವು ಬ್ಯಾಂಕ್ಗಳು ಪರಿಹಾರ ಹಣವನ್ನು ಸಾಲ ಮುರಿದುಕೊಳ್ಳಲು ಬಳಸಿಕೊಳ್ಳುತ್ತಿರುವುದರ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ವಾಣಿಜ್ಯ ಸಹಕಾರ ಬ್ಯಾಂಕ್ಗಳಿಗೆ ಈ ತಾಕೀತು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.