ADVERTISEMENT

‘ಸರ್ಕಾರದ ಪರಿಹಾರ ಸಾಲಕ್ಕೆ ಮರಿದುಕೊಳ್ಳುವಂತಿಲ್ಲ’

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 18:12 IST
Last Updated 12 ಫೆಬ್ರುವರಿ 2020, 18:12 IST

ಬೆಂಗಳೂರು: ನೈಸರ್ಗಿಕ ವಿಕೋಪ, ಹಾಲಿನ ಸಬ್ಸಿಡಿ, ಬೆಳೆ ಹಾನಿಗಾಗಿ ಸರ್ಕಾರ ನೀಡುವ ಪರಿಹಾರ ಮೊತ್ತವನ್ನು ಯಾವುದೇ ಕಾರಣಕ್ಕೂ ರೈತರ ಸಾಲ ಮೊತ್ತಕ್ಕೆ ಜಮಾ ಮಾಡಿಕೊಳ್ಳುವಂತಿಲ್ಲ ಎಂದು ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿಯ ಸಂಚಾಲಕರೂ ಆಗಿರುವ ಸಿಂಡಿಕೇಟ್‌ ಬ್ಯಾಂಕ್‌ನ ಮಹಾಪ್ರಬಂಧಕ ಟಿ.ಮಣಿವಣ್ಣನ್ ಅವರು ಸೂಚನೆ ನೀಡಿದ್ದಾರೆ.

ಕೆಲವು ಬ್ಯಾಂಕ್‌ಗಳು ಪರಿಹಾರ ಹಣವನ್ನು ಸಾಲ ಮುರಿದುಕೊಳ್ಳಲು ಬಳಸಿಕೊಳ್ಳುತ್ತಿರುವುದರ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ವಾಣಿಜ್ಯ ಸಹಕಾರ ಬ್ಯಾಂಕ್‌ಗಳಿಗೆ ಈ ತಾಕೀತು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT