ADVERTISEMENT

ಸ್ಥಳೀಯ ಸಂಸ್ಥೆ ಮೀಸಲಾತಿ: ತಡೆಯಾಜ್ಞೆ ತೆರವು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 3:03 IST
Last Updated 22 ಅಕ್ಟೋಬರ್ 2020, 3:03 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ತೆರವುಗೊಳಿಸಿದೆ.

ರೋಸ್ಟರ್‌ ಪಾಲಿಸಿಲ್ಲ ಎಂಬ ಅರ್ಜಿದಾರರ ಮನವಿ ಪರಿಗಣಿಸಿ ಏಕಸದಸ್ಯ ಪೀಠ ಅ.15ರಂದು ತಡೆಯಾಜ್ಞೆ ನೀಡಿತ್ತು.

ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ತಡೆಯಾಜ್ಞೆ ತೆರವುಗೊಳಿಸಿತು. ನವೆಂಬರ್ 2ರೊಳಗೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿತು.‌ ‘ಹಾಸನ, ಅರಸೀಕೆರೆ, ಶಿಡ್ಲಘಟ್ಟ, ಕೊಪ್ಪಳ, ಹರಿಹರ ನಗರಸಭೆಗೆ ನಿಗದಿ ಮಾಡಿರುವ ಮೀಸಲಾತಿ ಪ್ರಶ್ನಿಸಿ ರಿಟ್‌ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳಿಗೂ ಚುನಾವಣೆ ನಡೆಸಬೇಕು. ಆದರೆ, ಫಲಿತಾಂಶಗಳು ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತವೆ’ ಎಂದು ಪೀಠ ತಿಳಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.