ADVERTISEMENT

ಲಾಕರ್‌ ಕದ್ದೊಯ್ದ ಆರೋಪಿ ಸೆರೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2019, 19:00 IST
Last Updated 19 ಅಕ್ಟೋಬರ್ 2019, 19:00 IST

ಬೆಂಗಳೂರು: ಕಂಪನಿ ಮಾಲೀಕರ ಹಣವಿದ್ದ ಲಾಕರ್‌ ಕದ್ದೊಯ್ದಿದ್ದ ನೌಕರನನ್ನು ಕೇವಲ 24 ಗಂಟೆಯಲ್ಲಿ ಬಂಧಿಸುವಲ್ಲಿ ಬಂಡೇಪಾಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಸ್ಸಾಂನ ಕರೀಂಗಂಜ್‌ ಜಿಲ್ಲೆಯ ಮುಜಾಕೀರ್‌ ಹುಸೇನ್‌ ಬಂಧಿತ ಆರೋಪಿ. ಆತನಿಂದ ₹ 12 ಲಕ್ಷ ವಶಪಡಿಸಿಕೊಳ್ಳಲಾಗಿದೆ.

ಆರೋಪಿಯು ಬಂಡೇಪಾಳ್ಯದ ಮುನೇಶ್ವರ ನಗರದ ಪ್ರಸಿದ್ಧ ನಿಜಾಂಕಾರ್ಟ್‌ ಪ್ರೈವೇಟ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಂಪನಿ ಮಾಲೀಕರು ಹೊರಗಡೆ ಹೋಗಿದ್ದಾಗ ಲಾಕರ್‌ ಮುರಿದು ಹಣ ಕದಿಯಲು ಆರೋಪಿ ಯತ್ನಿಸಿದ್ದ. ಆದರೆ, ಅದು ಸಾಧ್ಯವಾಗದೇ ಇದ್ದಾಗ ಲಾಕ‌ರ್‌ನ್ನೇ ಕಳವು ಮಾಡಿದ್ದ.

ADVERTISEMENT

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಪರಾರಿಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.