ಬೆಂಗಳೂರು: ಮಲ್ಲೇಶ್ವರದಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಭೇಟಿ ನೀಡಿದರು.
ಲೋಕಾಯುಕ್ತ ನಗರ ವಿಭಾಗದ ಎಸ್ಪಿ ಸೈದುಲು ಅಡಾವತ್ ನೇತೃತ್ವದಲ್ಲಿ 8 ಡಿವೈಎಸ್ಪಿಗಳು ಹಾಗೂ 15 ಇನ್ಸ್ಪೆಕ್ಟರ್ಗಳು ಆಸ್ಪತ್ರೆಯ ಕಾರ್ಯ ವೈಖರಿ ಪರಿಶೀಲನೆ ಮಾಡಿದರು.
ರೋಗಿಗಳ ಅಹವಾಲು ಆಲಿಸಿದರು. ದೂರುಗಳನ್ನೂ ಪಡೆದುಕೊಂಡರು. ಆಸ್ಪತ್ರೆಯ ಕೆಲ ಅವ್ಯವಸ್ಥೆಗಳನ್ನು ಕಂಡು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.