ADVERTISEMENT

‘ಮಡಿವಾಳ ಸಮಾಜವನ್ನು ಎಸ್‌ಸಿಗೆ ಸೇರಿಸಿ’

ಪ್ರತಿಭಾ ಪುರಸ್ಕಾರದಲ್ಲಿ ಕರಿಂಜೆ ಕ್ಷೇತ್ರದ ಮುಕ್ತಾನಂದ ಸ್ವಾಮೀಜಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2019, 20:12 IST
Last Updated 11 ಆಗಸ್ಟ್ 2019, 20:12 IST
ಕಾರ್ಯಕ್ರಮದಲ್ಲಿ (ಕುಳಿತವರು ಎಡದಿಂದ) ಜನಪದ ಕಲಾವಿದ ಎಂ.ಲಿಂಗಯ್ಯ, ಕೃಷ್ಣಪ್ಪ, ಸಾಲುಮರದ ತಿಮ್ಮಕ್ಕ, ಅಪ್ಪಣ್ಣ ಮತ್ತು ರಂಗಭೂಮಿ ಕಲಾವಿದ ಕೆ.ಪಿ.ಅಶ್ವತ್ಥನಾರಾಯಣ ಅವರಿಗೆ ರಾಜ್ಯ ಮಡಿವಾಳ ಮಾಚಿದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೆಪಿಎಸ್‌ಸಿ ಸದಸ್ಯ ರವಿಕುಮಾರ್, ಬಿಜೆಪಿ ಸಹ ವಕ್ತಾರ ರಘು ಕೌಟಿಲ್ಯ, ಕಾಂಗ್ರೆಸ್ ಮುಖಂಡ ರಾಜು ಎಂ.ತಲ್ಲೂರು ಮತ್ತು ಸಂಘದ ಅಧ್ಯಕ್ಷ ಆರ್.ವೆಂಕಟರಮಣ ಇದ್ದಾರೆ– ಪ್ರಜಾವಾಣಿ ಚಿತ್ರ
ಕಾರ್ಯಕ್ರಮದಲ್ಲಿ (ಕುಳಿತವರು ಎಡದಿಂದ) ಜನಪದ ಕಲಾವಿದ ಎಂ.ಲಿಂಗಯ್ಯ, ಕೃಷ್ಣಪ್ಪ, ಸಾಲುಮರದ ತಿಮ್ಮಕ್ಕ, ಅಪ್ಪಣ್ಣ ಮತ್ತು ರಂಗಭೂಮಿ ಕಲಾವಿದ ಕೆ.ಪಿ.ಅಶ್ವತ್ಥನಾರಾಯಣ ಅವರಿಗೆ ರಾಜ್ಯ ಮಡಿವಾಳ ಮಾಚಿದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೆಪಿಎಸ್‌ಸಿ ಸದಸ್ಯ ರವಿಕುಮಾರ್, ಬಿಜೆಪಿ ಸಹ ವಕ್ತಾರ ರಘು ಕೌಟಿಲ್ಯ, ಕಾಂಗ್ರೆಸ್ ಮುಖಂಡ ರಾಜು ಎಂ.ತಲ್ಲೂರು ಮತ್ತು ಸಂಘದ ಅಧ್ಯಕ್ಷ ಆರ್.ವೆಂಕಟರಮಣ ಇದ್ದಾರೆ– ಪ್ರಜಾವಾಣಿ ಚಿತ್ರ   

ಬೆಂಗಳೂರು:ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಮಡಿವಾಳ ಮಾಚಿದೇವ ಪ್ರಶಸ್ತಿ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭಾನುವಾರ ಪ್ರತಿಭಾ ಪುರಸ್ಕಾರ ನೀಡಲಾಯಿತು.

‘ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಮೂಲಕ ಸರ್ಕಾರ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಮೂಡುಬಿದಿರೆ ಕರಿಂಜೆ ಕ್ಷೇತ್ರದ ಮುಕ್ತಾನಂದ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದರು.

‘ಮಡಿವಾಳ ಸಣ್ಣ ಸಮುದಾಯವಾಗಿರುವುದರಿಂದ ರಾಜಕೀಯವಾಗಿ ನೆಲೆ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ.ಸಮಾಜದಲ್ಲಿ ಒಬ್ಬರಿಗೊಬ್ಬರ ಕಾಲೆಳೆಯುವ ಕಾರ್ಯ ನಿಲ್ಲಬೇಕು. ಉನ್ನತ ಸ್ಥಾನದಲ್ಲಿರುವವರು ಸಮಾಜದ ಬಡವರಿಗೆ ನೆರವು ನೀಡಿದರೆ ಏಳಿಗೆ ಸಾಧ್ಯವಾಗುತ್ತದೆ’ ಎಂದರು.

ADVERTISEMENT

ಸಂಘದ ಅಧ್ಯಕ್ಷ ಆರ್. ವೆಂಕಟ ರಮಣ, ‘ಮಡಿವಾಳ ಮಾಚಿದೇವರ ಪ್ರಶಸ್ತಿಯನ್ನು ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದಲೇ ನೀಡುವಂತೆ ಸಮಾಜದ ಸದಸ್ಯರು ಆಗ್ರಹಿಸಬೇಕು’ ಎಂದರು.

ಶಾಸಕ ಸಿ.ಎನ್‌. ಅಶ್ವತ್ಥನಾರಾಯಣ ಮಾತನಾಡಿ, ‘ಪ್ರತಿ ರಾಜಕೀಯ ಪಕ್ಷವೂ ವ್ಯಕ್ತಿಗಳನ್ನು ಮತವನ್ನಾಗಿ ನೋಡುತ್ತದೆ. ಆದರೆ, ಮತಕ್ಕಿಂತ ಮಾನವೀಯತೆ ಮುಖ್ಯ. ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.

ಕೆಪಿಎಸ್‍ಸಿ ಸದಸ್ಯ ರವಿಕುಮಾರ್‌, ‘ಹಿಂದುಳಿದ ಸಮಾಜದಲ್ಲಿ ಹೆಚ್ಚು ಏಳಿಗೆ ಹೊಂದಿರುವ ಸಮುದಾಯ ಮಡಿವಾಳ ಸಮಾಜ. ಆದರೆ, ಸರ್ಕಾರ ಒದಗಿಸುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿ ಕೊಳ್ಳದೆ ಇದ್ದರೆ ನಮಗೆ ನಾವೇ ವಂಚನೆ ಮಾಡಿಕೊಂಡಂತೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.