ADVERTISEMENT

ಮಹದೇವಪುರದಲ್ಲಿ ಕಳ್ಳತನ: ಬಂಧನ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 21:52 IST
Last Updated 2 ಅಕ್ಟೋಬರ್ 2022, 21:52 IST
ಮಹದೇವಪುರ ಪೊಲೀಸರು ಬಂಧಿಸಿರುವ ಆರೋಪಿ ಚೇತನ್‌ಕುಮಾರ್ ಹಾಗೂ ಜಪ್ತಿ ಮಾಡಲಾದ ಚಿನ್ನಾಭರಣ
ಮಹದೇವಪುರ ಪೊಲೀಸರು ಬಂಧಿಸಿರುವ ಆರೋಪಿ ಚೇತನ್‌ಕುಮಾರ್ ಹಾಗೂ ಜಪ್ತಿ ಮಾಡಲಾದ ಚಿನ್ನಾಭರಣ   

ಬೆಂಗಳೂರು: ಮಹದೇವಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಚೇತನ್‌ಕುಮಾರ್ (23) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

‘ರಾಜಾಜಿನಗರ ಭೀಮಶಕ್ತಿನಗರದ ನಿವಾಸಿ ಎಸ್. ಚೇತನ್‌ಕುಮಾರ್ (23), 2021ರ ಅಕ್ಟೋಬರ್ 5ರಂದು ಕೃತ್ಯ ಎಸಗಿ ಪರಾರಿಯಾಗಿದ್ದ. ಸೂಕ್ತ ಪುರಾವೆಗಳನ್ನು ಸಂಗ್ರಹಿಸಿ
ಈತನನ್ನು ಬಂಧಿಸಲಾಗಿದೆ. ₹ 8 ಲಕ್ಷ ಮೌಲ್ಯದ 164 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿ ಚೇತನ್, ಸಹಚರರ ಜೊತೆ ಸೇರಿ ಕಳ್ಳತನ ಮಾಡುತ್ತಿದ್ದ. ಟಿನ್ ಫ್ಯಾಕ್ಟರಿ ಬಳಿ ಬಸ್ ಪ್ರಯಾಣಿಕರೊಬ್ಬರನ್ನು ಸುಲಿಗೆ ಮಾಡಿದ್ದ ಮಾಹಿತಿ ಇದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.