ADVERTISEMENT

ಮಹಾಲಕ್ಷ್ಮಿ ಲೇಔಟ್: 250 ಹಾಸಿಗೆಗಳ ಆರೈಕೆ ಕೇಂದ್ರ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 20:46 IST
Last Updated 13 ಜುಲೈ 2020, 20:46 IST
ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದಲ್ಲಿ ರಾಸಾಯನಿಕ ಸಿಂಪಡಣಾ ವಾಹನಕ್ಕೆ ಕೆ.ಗೋಪಾಲಯ್ಯ ಸೋಮವಾರ ಚಾಲನೆ ನೀಡಿದರು.
ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದಲ್ಲಿ ರಾಸಾಯನಿಕ ಸಿಂಪಡಣಾ ವಾಹನಕ್ಕೆ ಕೆ.ಗೋಪಾಲಯ್ಯ ಸೋಮವಾರ ಚಾಲನೆ ನೀಡಿದರು.   

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಪ್ರಿಸ್ಟಿನ್‌ ಆಸ್ಪತ್ರೆಯ ಸಹಯೋಗದಲ್ಲಿ 250 ಹಾಸಿಗೆಗಳ ಕೋವಿಡ್‌ ಆರೈಕೆ ಕೇಂದ್ರ ಮತ್ತು ರಾಸಾಯನಿಕ ಸಿಂಪಡಣಾ ವಾಹನಗಳಿಗೆ ಸೋಮವಾರ ಚಾಲನೆ ನೀಡಲಾಯಿತು.

ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಉದ್ಘಾಟಿಸಿದರು.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ವ್ಯಾಪ್ತಿಯಲ್ಲಿ ಕೊರೊನಾ ಪಾಸಿಟಿವ್ ಮತ್ತು ಇತರ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡಲು ಅಗತ್ಯವಾದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಜನ ಭಯಗೊಳ್ಳಬಾರದು ಎಂದು ಗೋಪಾಲಯ್ಯ ಕೇಳಿಕೊಂಡರು.

ADVERTISEMENT

ಆಸ್ಪತ್ರೆಯ ಮುಖ್ಯ ವೈದ್ಯ ಡಾ.ಎಚ್.ಎಂ ಪ್ರಸನ್ನ ಮಾತನಾಡಿ, ‘ಸರ್ಕಾರ ಮತ್ತು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಕೈಜೋಡಿಸಿ ಈ ರೋಗದಿಂದ ಬಳಲುತ್ತಿರುವವರಿಗೆ ಸಮರ್ಪಕ ಚಿಕಿತ್ಸೆ ನೀಡಲು ಅಗತ್ಯವಾದ ಎಲ್ಲಾ ನಿಯಮಗಳನ್ನು ಕೈಗೊಳ್ಳಲಾಗಿದೆ‘ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.