ADVERTISEMENT

ಮಹಾಶಿವರಾತ್ರಿ: ಫೆ.27ರಂದು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2024, 15:38 IST
Last Updated 24 ಫೆಬ್ರುವರಿ 2024, 15:38 IST
<div class="paragraphs"><p>ಮಹಾಶಿವರಾತ್ರಿ ಪ್ರಯುಕ್ತ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟಿರುವ ಪಾದಯಾತ್ರಿಗಳು</p></div>

ಮಹಾಶಿವರಾತ್ರಿ ಪ್ರಯುಕ್ತ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟಿರುವ ಪಾದಯಾತ್ರಿಗಳು

   

ಬೆಂಗಳೂರು: ಧರ್ಮಸ್ಥಳ ಪಾದಯಾತ್ರೆ ಸಮಿತಿಯಿಂದ ಮಹಾಶಿವರಾತ್ರಿ ಅಂಗವಾಗಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. 37ನೇ ವರ್ಷದ ಪಾದಯಾತ್ರೆ ಇದಾಗಿದೆ.

ಮಹಾಲಕ್ಷ್ಮಿ ಬಡಾವಣೆಯ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದಿಂದ ಫೆ.27ರಂದು ಮುಂಜಾನೆ ಪಾದಯಾತ್ರೆ ಹೊರಡಲಿದೆ. ನೆಲಮಂಗಲ, ಕುಣಿಗಲ್‌, ಉದಯಪುರ, ಶಾಂತಿಗ್ರಾಮ, ಹಗರೆ, ಬೇಲೂರು, ನವೀಲಹಳ್ಳಿ, ಕಸ್ಕೇಬೈಲು, ಗೋಣಿಬೀಡು, ಚಾರ್ಮಾಡಿ ಮಾರ್ಗವಾಗಿ ಧರ್ಮಸ್ಥಳದವರೆಗೆ ಪಾದಯಾತ್ರೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.