ADVERTISEMENT

ಮಲ್ಲೇಶ್ವರ: ₹10 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಪ್ರಜಾವಾಣಿ ಚಿತ್ರ
Published 5 ಡಿಸೆಂಬರ್ 2020, 23:03 IST
Last Updated 5 ಡಿಸೆಂಬರ್ 2020, 23:03 IST
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಡಾ. ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಡಾ. ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದರು   

ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹10 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಶನಿವಾರ ಚಾಲನೆ ನೀಡಿದರು.

ಮತ್ತಿಕೆರೆಯ ಉಪವಿಭಾಗದಲ್ಲಿ ಸುಮಾರು ₹2.90 ಕೋಟಿ ವೆಚ್ಚದಲ್ಲಿ ಆರ್.ಕೆ.ಉದ್ಯಾನ, ಅಟಲ್‌ಜಿ ಉದ್ಯಾನ, 16ನೇ ಕ್ರಾಸ್‌ ಉದ್ಯಾನ, ಸ್ಯಾಂಕಿ ಕೆರೆ ಎದುರಿನ ಉದ್ಯಾನ, ಕೆಂಪೇಗೌಡ ಗೋಪುರ ಉದ್ಯಾನದ ವಿವಿಧ ಆಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. .

ಮಲ್ಲೇಶ್ವರದ 18ನೇ ಕ್ರಾಸ್‌ನಲ್ಲಿರುವ ಆಟದ ಮೈದಾನವನ್ನು ಸುಮಾರು ₹16.77 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಶಿವಾಜಿ ಪಾರ್ಕ್‌ ₹2.41 ಕೋಟಿ ಕಾಮಗಾರಿಗೆ, ಮಲ್ಲೇಶ್ವರ ಉಪ ವಿಭಾಗದಲ್ಲಿ 2.96 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳು ನಡೆಯಲಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.