ADVERTISEMENT

ಸಾರ್ವಜನಿಕರ ಮೇಲೆ ಕಾರು ಹರಿಸಲು ಯತ್ನ

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 20:35 IST
Last Updated 21 ಜನವರಿ 2023, 20:35 IST

ಬೆಂಗಳೂರು: ಅಪಘಾತವನ್ನುಂಟು ಮಾಡಿ ಸಾರ್ವಜನಿಕರ ಮೇಲೆಯೇ ಕಾರು ಹರಿಸಲು ಯತ್ನಿಸಿ ಚಾಲಕರೊಬ್ಬರು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಮಲ್ಲೇಶ್ವರ ಸಂಚಾರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

‘ರಾಜಾಜಿನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಬೈಕ್‌ಗೆ ಫಾರ್ಚ್ಯೂನರ್ ಕಾರೊಂದು ಡಿಕ್ಕಿ ಹೊಡೆದಿತ್ತು. ಬೈಕ್ ಸವಾರ ಗಾಯಗೊಂಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕಾರು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿತ್ತು. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು, ಕಾರು ಚಾಲಕನನ್ನು ಪ್ರಶ್ನಿಸಿದ್ದರು. ಅದೇ ಸಂದರ್ಭದಲ್ಲೇ ಆರೋಪಿತ ಚಾಲಕ, ಕಾರು ಸಮೇತ ಪರಾರಿಯಾಗಲು ಮುಂದಾಗಿದ್ದರು. ಸಾರ್ವಜನಿಕರು ಕಾರು ತಡೆಯಲು ಹೋಗಿದ್ದರು.’

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.