ADVERTISEMENT

ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2019, 6:24 IST
Last Updated 27 ನವೆಂಬರ್ 2019, 6:24 IST
ಮುರುಗೇಶ್‌ ಮತ್ತು ಗೀತಾ
ಮುರುಗೇಶ್‌ ಮತ್ತು ಗೀತಾ   

ಬೆಂಗಳೂರು: ಕೌಟುಂಬಿಕ ಕಲಹ ಕಾರಣಕ್ಕೆ ಪತ್ನಿಯನ್ನು ಚಾಕುವಿನಿಂದ ಇರಿದು ‌ಕೊಲೆ ಮಾಡಿದ ಪತಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿನಾಯಕನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.

ತಮಿಳುನಾಡಿನ ಮುರುಗೇಶ್ (48) ಮತ್ತು ಪತ್ನಿ ವಸಂತಾ (35) ಮೃತಪಟ್ಟವರು. 15 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ದಂಪತಿ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರಿಗೆ 13 ಮತ್ತು 11 ವರ್ಷ ವಯಸ್ಸಿನ ಇಬ್ಬರು ಮಕ್ಕಳಿದ್ದಾರೆ. ಕ್ಯಾಬ್‌ ಚಾಲಕನಾಗಿದ್ದ ಮುರುಗೇಶ್‌, ಇತ್ತೀಚೆಗೆ ಕೆಲಸಕ್ಕೆ ಹೋಗುತ್ತಿರಲಿಲ್ಲ.

‘ಪತ್ನಿ ಬೇರೊಬ್ಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಆಕೆಯ ಜೊತೆ ಮುರುಗೇಶ್ ನಿತ್ಯ ಜಗಳ ಮಾಡುತ್ತಿದ್ದ. ಇದೇ ವಿಷಯಕ್ಕೆ ಕೊಲೆ ನಡೆದಿರುವ ಸಾಧ್ಯತೆ ಇದೆ’ ಎಂದು ಪೊಲೀಸ್‌ ಆಧಿಕಾರಿಯೊಬ್ಬರು ಹೇಳಿದರು.

ADVERTISEMENT

ದಂಪತಿ ನಡುವೆ ಸೋಮವಾರ ರಾತ್ರಿ ಕೂಡಾ ಜಗಳ ನಡೆದಿತ್ತು. ಈ ವೇಳೆ ಮಕ್ಕಳಿಬ್ಬರೂ ಕೊಠಡಿಯಲ್ಲಿ ಮಲಗಿದ್ದರು. ಬೆಳಿಗ್ಗೆ ಎಂಟೂವರೆ ಸುಮಾರಿಗೆ ಎದ್ದು ಮಕ್ಕಳಿಬ್ಬರು ಹೊರಗೆ ಹಾಲ್‌ಗೆ ಬಂದಾಗ ತಾಯಿ ಕೊಲೆಯಾಗಿರುವುದು ಮತ್ತು ತಂದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಮಕ್ಕಳ ಕೂಗು ಕೇಳಿ ಅಕ್ಕಪಕ್ಕದ ನಿವಾಸಿಗಳು ಬಂದು ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.