ADVERTISEMENT

ಟ್ರಾನ್ಸ್‌ಫಾರ್ಮರ್‌ ಸ್ಫೋಟ: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2022, 19:45 IST
Last Updated 23 ಮಾರ್ಚ್ 2022, 19:45 IST

ಬೆಂಗಳೂರು: ಟ್ರಾನ್ಸ್‌ಫಾರ್ಮರ್‌ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಂಗನಹಳ್ಳಿ ನಿವಾಸಿ ಶಿವರಾಜ್‌ (55) ಚಿಕಿತ್ಸೆಗೆ ಸ್ಪಂದಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಶಿವರಾಜ್‌ ಅವರು ಪುತ್ರಿ ಚೈತನ್ಯ (18) ಜೊತೆ ಮಂಗನಹಳ್ಳಿ ಮೇಲ್ಸೇತುವೆ ಬಳಿ ಇರುವ ಫೆಡರಲ್‌ ಬ್ಯಾಂಕ್‌ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡಿತ್ತು. ಬೆಂಕಿ ಜ್ವಾಲೆಯಿಂದಾಗಿ ಇಬ್ಬರ ದೇಹ ಸುಟ್ಟು ಹೋಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನೂ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT