
ಬೆಂಗಳೂರು: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರಿಗೆ ಶೇ 50ರಷ್ಟು ಹಾಸಿಗೆ ನೀಡದ ಆಸ್ಪತ್ರೆಗಳ ವಿರುದ್ಧ ಬಿಬಿಎಂಪಿ ಮತ್ತು ಪೊಲೀಸ್ ಅಧಿಕಾರಿಗಳು ಶುಕ್ರವಾರ ಜಂಟಿ ಕಾರ್ಯಾಚರಣೆ ನಡೆಸಿದರು.
ಬ್ರೂಕ್ ಫೀಲ್ಡ್ ಆಸ್ಪತ್ರೆ, ಜೀವಿಕಾ ಆಸ್ಪತ್ರೆ, ಕೊಶೈ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆ (ವೈಟ್ ಫೀಲ್ಡ್), ನಾರ್ತ್ ಸೈಡ್ ಆಸ್ಪತ್ರೆ, ಸಾಯಿ ಆಸ್ಪತ್ರೆಗಳಿಗೆ ಬಿಬಿಎಂಪಿ ಜಂಟಿ ಆಯುಕ್ತ ವೆಂಕಟಾಚಲಪತಿ, ಡಿಸಿಪಿ ದೇವರಾಜ್, ಆರೋಗ್ಯಾಧಿಕಾರಿ ಡಾ. ಸುರೇಂದ್ರ ಮತ್ತು ಇತರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
‘ಮಣಿಪಾಲ್ ಆಸ್ಪತ್ರೆಯಲ್ಲಿ 106 ಹಾಸಿಗೆಗಳಿದ್ದು, ಅದರಲ್ಲಿ 42 ಹಾಸಿಗೆಗಳನ್ನಷ್ಟೇ ಕೋವಿಡ್ ಸೋಂಕಿತರಿಗೆ ಮೀಸಲಿಡಲಾಗಿತ್ತು. ಈ ಸಂಬಂಧ ನೋಟಿಸ್ ಜಾರಿ ಮಾಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಹೊರ ರೋಗಿಗಳ ವಿಭಾಗವನ್ನು 2 ಗಂಟೆ ಬಂದ್ ಮಾಡಲಾಯಿತು. ಬಳಿಕ ಶೇ 50ರಷ್ಟು ಹಾಸಿಗೆಯನ್ನು ಆಸ್ಪತ್ರೆ ಮೀಸಲು ಇಟ್ಟಿತು’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.