ಬೆಂಗಳೂರು: ಕೋವಿಡ್ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸುವವರನ್ನು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಲು ಬಿಬಿಎಂಪಿ ಮಾರ್ಷಲ್ಗಳ ಗಸ್ತು ಪಡೆಯನ್ನು ರಚಿಸಿದೆ. ರಾತ್ರಿ ಹಗಲು ಕಾರ್ಯನಿರ್ವಹಿಸುವ ಈ ಪಡೆಗೆ ವಲಯಕ್ಕೊಂದು ಗಸ್ತು ವಾಹನವನ್ನು ಒದಗಿಸಿದೆ. ಪ್ರತಿ ಗಸ್ತು ವಾಹನದಲ್ಲಿ ಐವರು ಮಾರ್ಷಲ್ಗಳು ಒಬ್ಬ ಮೇಲ್ವಿಚಾರಕ ಇರಲಿದ್ದಾರೆ.
‘ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೆ ಅಡ್ಡಾಡುವುದು, ಅಂತರ ಕಾಪಾಡದಿರುವುದು ಮುಂತಾದ ಕೋವಿಡ್ ನಿಯಂತ್ರಣ ನಿಯಮಗಳ ಉಲ್ಲಂಘನೆ ಪತ್ತೆ ಹಚ್ಚಿ ದಂಡ ವಿಧಿಸಲು ಈ ಗಸ್ತು ವಾಹನಗಳನ್ನು ಆದ್ಯತೆ ಮೇರೆಗೆ ಬಳಸಿಕೊಳ್ಳಲಾಗುತ್ತದೆ. ಈ ವಾಹನಗಳು ರಾತ್ರಿ ಹಗಲು ಗಸ್ತು ತಿರುಗಲಿವೆ. ಇದರಲ್ಲಿರುವ ಮಾರ್ಷಲ್ಗಳು ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವವರನ್ನೂ ಪತ್ತೆ ಹಚ್ಚಿ ದಂಡ ವಿಧಿಸಲಿದ್ದಾರೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.
ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅವರು ಈ ಗಸ್ತು ವಾಹನಗಳಿಗೆ ಶುಕ್ರವಾರ ಚಾಲನೆ ನೀಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.