ಬೆಂಗಳೂರು: ಡಾ.ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಟ್ರಸ್ಟ್, ಮಾಸ್ತಿ ಅವರ 128ನೇ ಜನ್ಮದಿನದ ಅಂಗವಾಗಿ ನೀಡುವ ಪ್ರಶಸ್ತಿಗಾಗಿ ಕಥೆ, ಕಾದಂಬರಿಗಳನ್ನು ಆಹ್ವಾನಿಸಿದೆ.
ಕಳೆದ ವರ್ಷ ಪ್ರಕಟಿಸಿದ ಕೃತಿಗಳನ್ನು ಸ್ಪರ್ಧೆಗೆ ಕಳಿಸಬಹುದು. ಪ್ರಶಸ್ತಿ ಪಡೆದ ಕಥಾ ಸಂಕಲನ, ಕಾದಂಬರಿ ಪುರಸ್ಕೃತ ಲೇಖಕರಿಗೆ ₹ 25 ಸಾವಿರ ಮತ್ತು ಪ್ರಕಾಶಕರಿಗೆ ₹ 10 ಸಾವಿರ ಬಹುಮಾನ ನೀಡಲಾಗುತ್ತದೆ.
ಏಪ್ರಿಲ್ 15ರೊಳಗೆ ನಾಲ್ಕು ಪ್ರತಿಗಳನ್ನು ಕಳುಹಿಸಿಕೊಡಬೇಕು.
ವಿಳಾಸ: ಅಧ್ಯಕ್ಷರು, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್, ನಂ.21, ಯಲ್ಲಪ್ಪ ಗಾರ್ಡನ್, 10ನೇ ಕ್ರಾಸ್, ಮಲ್ಲೇಶ್ವರ.
ಸಂಪರ್ಕ: 080 23363347
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.