ADVERTISEMENT

‘ಮೇಯರ್ ಕಪ್’ ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2019, 19:05 IST
Last Updated 2 ಆಗಸ್ಟ್ 2019, 19:05 IST

ಬೆಂಗಳೂರು:‌ಬಿಬಿಎಂಪಿ ಮತ್ತು ರಾಜ್ಯಬ್ಯಾಸ್ಕೆಟ್‌ಬಾಲ್ ಸಂಸ್ಥೆ ಸಹಯೋಗದಲ್ಲಿ ‘ಮೇಯರ್ ಕಪ್’ ಬ್ಯಾಸ್ಕೆಟ್‌ಬಾಲ್ ರಾಜ್ಯ ಮಟ್ಟದ ಪಂದ್ಯಾಟ ಆ.7 ರಿಂದ 11ರವರೆಗೆ ನಡೆಯಲಿದೆ ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು.

ಜಯನಗರ ವಾರ್ಡ್‌ನ ಕೃಷ್ಣರಾವ್ ಉದ್ಯಾನದಲ್ಲಿ ನಡೆಯುವಪಂದ್ಯಾವಳಿಯಲ್ಲಿ ವಿವಿಧ ರಾಜ್ಯಗಳಿಂದ 64 ತಂಡಗಳು ಭಾಗವಹಿಸಲಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದೇ ಉದ್ಯಾನದಲ್ಲಿ ನಿರ್ಮಾಣಗೊಂಡಿರುವ ‘ಶಿವಕುಮಾರ ಸ್ವಾಮೀಜಿ’ ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು ಆ.9 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ. ಕ್ರಿಯೇಟಿವ್ ಸ್ಪೋರ್ಟ್ಸ್ ಅಕಾಡೆಮಿ, ಪ್ರೀಮಿಯರ್ ಲೀಗ್ ಅಕಾಡೆಮಿ ಸಹಯೋಗದಲ್ಲಿ ‘ಮೇಯರ್ ಕಪ್’ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನುಆ.9ರಿಂದ 12ರವರೆಗೆಇದೇ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.