ADVERTISEMENT

ಗುತ್ತಿಗೆದಾರನಿಗೆ ₹ 50 ಸಾವಿರ ದಂಡ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2018, 19:12 IST
Last Updated 17 ನವೆಂಬರ್ 2018, 19:12 IST

ಬೆಂಗಳೂರು: ಶಾಂತಿನಗರದ ಸ್ಮಶಾನದಲ್ಲಿ ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಡೆಸದ ಗುತ್ತಿಗೆದಾರನಿಗೆ ಮೇಯರ್‌ ಗಂಗಾಂಬಿಕೆ ಅವರು ಶನಿವಾರ ₹ 50 ಸಾವಿರ ದಂಡ ವಿಧಿಸಿದರು.

ಮೇಯರ್‌ ಅವರು ಸ್ಮಶಾನಕ್ಕೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿನ ಪಾದಚಾರಿ ಮಾರ್ಗ ಹಾಗೂ ರಸ್ತೆ ಮೇಲೆ ಕಸದ ರಾಶಿ ಹಾಗೆಯೇ ಇದ್ದುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಸ ವಿಲೇವಾರಿ ಮಾಡದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಬಳಿಕ ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ನಡೆಯುತ್ತಿರುವ ಸಿಗ್ನಲ್‌ ಫ್ರೀ ಕಾರಿಡಾರ್‌ ಕಾಮಗಾರಿ ವೀಕ್ಷಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.