
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು ತಮ್ಮ ವಿರುದ್ಧ ಪತ್ರಿಕಾಗೋಷ್ಠಿ ನಡೆಸದಂತೆ ಸಂಸದ ಪ್ರತಾಪ ಸಿಂಹ ಅವರು ತಂದಿದ್ದ ಮಾಧ್ಯಮ ನಿರ್ಬಂಧಕಾಜ್ಞೆಯನ್ನು ನ್ಯಾಯಾಲಯ ತೆರವುಗೊಳಿಸಿದೆ.
ಮೈಸೂರಿನ ಸಂಸದ ಪ್ರತಾಪ್ ಸಿಂಹ ಬೆಂಗಳೂರಿನ 9ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
‘ಪ್ರತಾಪ ಸಿಂಹ ಅವರು ಬೆಂಗಳೂರಿನ ವಿಳಾಸ ನೀಡಿ ಮಾಧ್ಯಮ ನಿರ್ಬಂಧಕಾಜ್ಞೆ ತಂದಿದ್ದರು’ ಎಂದು ವಕೀಲರು ಹೇಳಿದರು.
ಲಕ್ಷ್ಮಣ್ ಅವರ ಪರವಾಗಿ ವಕೀಲರಾದ ಎಸ್.ಎ.ಅಹಮದ್, ಸೂರ್ಯ ಮುಕುಂದರಾಜ್ ಹಾಗೂ ಸಂಜಯ್ ಯಾದವ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.