ADVERTISEMENT

ಮೇಖ್ರಿ–ಕಾವೇರಿ ಜಂಕ್ಷನ್‌: ಕಾಮಗಾರಿ ಬಹುತೇಕ ಪೂರ್ಣ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 21:04 IST
Last Updated 19 ಮಾರ್ಚ್ 2023, 21:04 IST

ಬೆಂಗಳೂರು: ‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೇಖ್ರಿ ವೃತ್ತದಿಂದ ಕಾವೇರಿ
ಜಂಕ್ಷನ್‌ವರೆಗಿನ ರಸ್ತೆ ವಿಸ್ತರಣೆ ಕಾರ್ಯವು ಶೇ 95ರಷ್ಟು ಪೂರ್ಣಗೊಂಡಿದೆ‘ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್‌ಗೆ ತಿಳಿಸಿದೆ.

ನಗರದ ‘ಸಮರ್ಪಣಾ ಸಾಂಸ್ಕೃತಿಕ ಮತ್ತು ಸೇವಾ ಸಂಘ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಬಿಬಿಎಂಪಿ ಈ ಪ್ರಮಾಣಪತ್ರ ಸಲ್ಲಿಸಿದ್ದು, ‘ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ’ ಎಂದು ವಿವರಿಸಿದೆ. ಇದನ್ನು ದಾಖಲಿಸಿಕೊಂಡ ನ್ಯಾಯ ಪೀಠ ಪ್ರಮಾಣಪತ್ರದ ಪ್ರತಿಯನ್ನು ಅರ್ಜಿದಾರರ ಪರ ವಕೀಲರಿಗೆ ಒದಗಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT