ADVERTISEMENT

ಬಿಸಿಲಿನ ತಾಪಕ್ಕೆ ತಂಪೆರೆದ ಮಳೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 21:57 IST
Last Updated 19 ಮಾರ್ಚ್ 2022, 21:57 IST

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದ್ದು, ನಗರದಲ್ಲೂ ಬಹುತೇಕ ಪ್ರದೇಶಗಳಲ್ಲಿ ಶನಿವಾರ ಉತ್ತಮ ಮಳೆ ಆಯಿತು.

ಬೇಸಿಗೆ ಆರಂಭವಾಗುತ್ತಿದ್ದಂತೆ ನಗರದಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದೆ. ಕೆಲದಿನಗಳಿಂದ ನಗರದ ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದರು. ಶನಿವಾರ ಸುರಿದ ಮಳೆ ನಗರಕ್ಕೆ ತಂಪೆರೆಯಿತು. ಅದರಲ್ಲೇ ವಾಹನಗಳು ಸಂಚರಿಸಿದ ದೃಶ್ಯಗಳು ಕಂಡುಬಂದವು. ವಿಜಯನಗರ, ರಾಜಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಕಾಟನ್‌ಪೇಟೆ, ವಿಧಾನಸೌಧ ಸುತ್ತಮುತ್ತ, ಮಲ್ಲೇಶ್ವರ, ನಂದಿನಿಲೇಔಟ್, ಯಶವಂತಪುರ, ಸದಾಶಿವನಗರ, ಬಸವನಗುಡಿ, ಗಿರಿನಗರ, ಜೆ.ಪಿ.ನಗರ ಹಾಗೂ ಇತರೆಡೆ ಮಳೆ ಸುರಿಯಿತು.

‘ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು– ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.