ADVERTISEMENT

ಬೆಂಗಳೂರು: ಮೆಟ್ರೊ ಸಂಚಾರದಲ್ಲಿ ವ್ಯತ್ಯಯ ಇಂದು

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2021, 6:09 IST
Last Updated 9 ಅಕ್ಟೋಬರ್ 2021, 6:09 IST

ಬೆಂಗಳೂರು: ನಗರದ ಎಂ.ಜಿ. ರಸ್ತೆ ನಿಲ್ದಾಣದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಮೆಟ್ರೊ ರೈಲು ಸಂಚಾರ ಸೇವೆಯು ಅ.9ರಂದು ಮಧ್ಯಾಹ್ನ 4 ಗಂಟೆಯಿಂದ ಅ.10ರ ಬೆಳಿಗ್ಗೆ 6ರವರೆಗೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.

ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ನಿಲ್ದಾಣಗಳ ನಡುವೆ ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್‌ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಎಲ್‌. ಯಶವಂತ್‌ ಚವ್ಹಾಣ್ ತಿಳಿಸಿದ್ದಾರೆ.

ಈ ಅವಧಿಯಲ್ಲಿ ನೇರಳೆ ಮಾರ್ಗದಲ್ಲಿನ ಮೆಟ್ರೊ ರೈಲು ಸೇವೆಯು ಎಂ.ಜಿ. ರಸ್ತೆ ಮತ್ತು ಕೆಂಗೇರಿ ಮೆಟ್ರೊ ನಿಲ್ದಾಣಗಳ ನಡುವೆ ಮಾತ್ರ ಲಭ್ಯವಿರುತ್ತದೆ. ದುರಸ್ತಿ ಕಾಮಗಾರಿಯು ಪೂರ್ಣಗೊಂಡ ನಂತರ ಅ.10ರಿಂದ ಎಂದಿನಂತೆ ಮೆಟ್ರೊ ರೈಲು ಸೇವೆಯು ನೇರಳೆ ಮಾರ್ಗದಲ್ಲಿ ಪ್ರಯಾಣಿಕರಿಗೆ ಮತ್ತೆ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ಹಸಿರು ಮಾರ್ಗದಲ್ಲಿ ಅ.9ರಂದು ಮೆಟ್ರೊ ರೈಲು ಸೇವೆಯು ಎಂದಿನಂತೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.