ಬೆಂಗಳೂರು: ಆರ್.ವಿ. ರಸ್ತೆ-ಯಲಚೇನಹಳ್ಳಿ ನಡುವೆ ನಾಲ್ಕು ದಿನಗಳಿಂದ ಸ್ಥಗಿತಗೊಂಡಿದ್ದ ಮೆಟ್ರೊ ರೈಲು ಸೇವೆ ಸೋಮವಾರದಿಂದ ಪುನರಾರಂಭಗೊಳ್ಳಲಿದೆ. 24 ಕಿ.ಮೀ. ಉದ್ದದ ಹಸಿರು ಮಾರ್ಗದಲ್ಲಿ ಎಂದಿನಂತೆ ‘ನಮ್ಮ ಮೆಟ್ರೊ’ ರೈಲು ಸಂಚರಿಸಲಿದೆ.
ಎರಡನೇ ಹಂತದ ಎತ್ತರಿಸಿದ ಮಾರ್ಗದಲ್ಲಿ ಬರುವ ಬೊಮ್ಮಸಂದ್ರದಲ್ಲಿ ವಯಡಕ್ಟ್ ಅಳವಡಿಕೆ ಕಾರ್ಯ ಮುಗಿದಿದೆ. ಹಾಗಾಗಿ, ನ. 18ರ ಬೆಳಿಗ್ಗೆ 5ರಿಂದ ನಾಗಸಂದ್ರ ಹಾಗೂ ಯಲಚೇನಹಳ್ಳಿಯಿಂದ ಮೆಟ್ರೊ ರೈಲುಗಳು ಎಂದಿನಂತೆ ಸಂಚರಿಸಲಿವೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚವಾಣ್ ತಿಳಿಸಿದರು.
ಬೊಮ್ಮಸಂದ್ರದಲ್ಲಿ ವಯಡಕ್ಟ್ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ನ. 14ರಿಂದ 17ರವರೆಗೆ ಆರ್.ವಿ. ರಸ್ತೆ ಯಲಚೇನಹಳ್ಳಿ ನಡುವೆ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದಕ್ಕೆ ಪರ್ಯಾಯವಾಗಿ ಬಿಎಂಟಿಸಿ ಬಸ್ಗಳ ಉಚಿತ ಸೇವೆ ಕಲ್ಪಿಸಲಾಗಿತ್ತು. ಆದರೂ ನಿಗದಿತ ಸಮಯದಲ್ಲಿ ನಿಗದಿತ ಸ್ಥಳ ತಲುಪಲು ಪ್ರಯಾಣಿಕರು ಪರದಾಡಿದ್ದರು. ಸಂಚಾರದಟ್ಟಣೆ ಕೂಡ ಉಂಟಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.