ADVERTISEMENT

ದುಷ್ಕರ್ಮಿಗಳ ಹೆಡೆಮುರಿ ಕಟ್ಟುತ್ತೇವೆ: ಆರ್‌. ಅಶೋಕ

‘ಹಲವು ಪ್ರದೇಶಗಳಿಗೆ ಗಲಭೆ ಹಬ್ಬಿಸುವ ಸಂಚು’

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 22:39 IST
Last Updated 12 ಆಗಸ್ಟ್ 2020, 22:39 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ‘ಗಲ್ಲಿ ಗಲ್ಲಿಗೆ ನುಗ್ಗಿ, ಮನೆ ಮನೆಗೆ ನುಗ್ಗಿ ಹಿಂಸಾಚಾರ ಮಾಡಿದ ದುಷ್ಕರ್ಮಿಗಳನ್ನು ಹಿಡಿದು ಹೆಡೆಮುರಿ ಕಟ್ಟಿ ಜೈಲಿಗೆ ತಳ್ಳುತ್ತೇವೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಜತೆ ಮಾತುಕತೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಾಂಧಲೆ ನಡೆಸುವವರನ್ನು ಸರ್ವನಾಶ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

‘ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಪೆಟ್ರೋಲ್‌ ಬಾಂಬ್‌ ಹಾಕಿ ಮನೆಯನ್ನು ಸುಟ್ಟು ಹಾಕಿದ್ದಾರೆ. ಶ್ರೀನಿವಾಸಮೂರ್ತಿ ಅವರನ್ನು ಮುಗಿಸಲು ಸಂಚು ಮಾಡಿದಂತೆ ಕಾಣುತ್ತದೆ. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ನಂತರ ಶಿವಾಜಿನಗರ ಮತ್ತು ಇತರ ಕಡೆಗಳಲ್ಲಿ ಗಲಭೆ ಸೃಷ್ಟಿಸುವ ಉದ್ದೇಶ ಗಲಭೆಕೋರರಿಗೆ ಇತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಗಲಭೆ ಬೇರೆ ಕಡೆಗಳಿಗೆ ಹಬ್ಬಿಸುವುದನ್ನು ತಪ್ಪಿಸಿದರು’ ಎಂದು ಅಶೋಕ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.