ADVERTISEMENT

ಆರ್‌.ಅಶೋಕ ಅವರ ಜೊತೆಗಿನ ಮುಸುಕಿನ ಗುದ್ದಾಟ: ಸಂಪುಟ ಸಭೆಯಲ್ಲಿ ಸೋಮಣ್ಣ ಭಾವುಕ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2022, 20:57 IST
Last Updated 25 ಆಗಸ್ಟ್ 2022, 20:57 IST
ವಿ ಸೋಮಣ್ಣ
ವಿ ಸೋಮಣ್ಣ    

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಮತ್ತು ಕಂದಾಯ ಸಚಿವ ಆರ್‌.ಅಶೋಕ ಅವರ ನಡುವಿನ ಮುಸುಕಿನ ಗುದ್ದಾಟ ಮತ್ತೊಮ್ಮೆ ಬಹಿರಂಗಗೊಂಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಅಶೋಕ ಅವರ ಹೆಸರು ಉಲ್ಲೇಖಿಸದೇ ಸೋಮಣ್ಣ ಆಡಿರುವ ಮಾತು ಚರ್ಚೆಗೆ ಗ್ರಾಸವಾಗಿದೆ.

‘ಬೆಂಗಳೂರು ನಗರದ ಅಭಿವೃದ್ಧಿಗೆ ವಿಚಾರದಲ್ಲಿ ನನ್ನ ಮಾತಿಗೆ ಕಿಮ್ಮತ್ತು ಇಲ್ಲ. ಒಬ್ಬರ ಮಾತು ಮಾತ್ರ ನಡೆಯುತ್ತಿದೆ’ ಎಂದು ಸೋಮಣ್ಣ ಅವರು ಭಾವುಕರಾಗಿ ಹೇಳಿದ್ದಾಗಿ ಮೂಲಗಳು ತಿಳಿಸಿವೆ.

‘ಹೀಗೆ ನಿರ್ಲಕ್ಷಿಸಿದರೆ ನಾವು ಕೆಲಸ
ಮಾಡುವುದು ಹೇಗೆ? ಹಿರಿಯನಾಗಿ ನನಗೆ ಬೆಲೆ ಕೊಡದಿದ್ದರೆ ಬೇರೆ ಮಾರ್ಗ
ವಿಲ್ಲ’ ಎಂದು ಬೇಸರ ಹೊರಹಾಕಿದರು. ಆ ವೇಳೆಯಲ್ಲಿ ಕೆಲ ಸಚಿವರು ಸೋಮಣ್ಣ ಅವರನ್ನು ಸಮಾಧಾನಪಡಿಸಿದರು ಎಂದು ಮೂಲಗಳು ಹೇಳಿವೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.